TOP NEWS
Cm dk shivakumar strict warning to forest department officers

DK Shivakumar: ಅರಣ್ಯ ಇಲಾಖೆ ಪ್ರಗತಿ ಪರಿಶೀಲನೆ: ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಜುಲೈ 15ರ ಗಡುವು ನೀಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನಸೌಧದಲ್ಲಿ ಇತ್ತೀಚೆಗೆ ನಡೆದ ಅರಣ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರಿಗಳಿಗೆ ಕಠಿಣ ನಿರ್ದೇಶನಗಳನ್ನು ನೀಡಿದ್ದಾರೆ. ಇಲಾಖೆಯ ಆಡಳಿತ ವ್ಯವಸ್ಥೆ, ಬಾಕಿ ಇರುವ ಯೋಜನೆಗಳು ಹಾಗೂ ವನ್ಯಜೀವಿ ಸಂರಕ್ಷಣೆಯ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ, ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಲಾಯಿತು. ಸಭೆಯ ಪ್ರಮುಖ ನಿರ್ಧಾರಗಳು ಹಾಗೂ ಚರ್ಚೆಯ ವಿವರಗಳು ಈ ಕೆಳಗಿನಂತಿವೆ: ಕಾಲಮಿತಿಯೊಳಗೆ ಅನುಮತಿ ಮತ್ತು ಕಠಿಣ ಕ್ರಮF ಅರಣ್ಯವಾಸಿಗಳ ಹಕ್ಕು ಹಾಗೂ ಮೂಲಸೌಕರ್ಯಕ್ಕೆ…

Read More
Let the DK Chants Roar in 2028 Polls CM

DK Shivakumar: ನೀವು ನಮ್ಮ ಬಗ್ಗೆ ಕಾಳಜಿ ಮಾಡಿ, ನಾವು ನಿಮ್ಮ ಬಗ್ಗೆ ಕಾಳಜಿ ಮಾಡುತ್ತೇವೆ: ಡಿಕೆಶಿ

ಬೆಂಗಳೂರು: ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡದಿರುವ ವಿಚಾರವಾಗಿ ನಾನೊಬ್ಬನೇ ತೀರ್ಮಾನ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ, ನಿಮ್ಮ ಅಭಿಪ್ರಾಯದ ಮೇರೆಗೆ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಭರವಸೆ ನೀಡಿದರು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಹಾಗೂ ಅಸೋಸಿಯೇಷನ್ ಒಕ್ಕೂಟದವರು ಬೆಂಗಳೂರು ಅರಮನೆ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ಅಭಿನಂದನೆ ಸಮಾರಂಭದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ವಿದ್ಯುತ್ ನಿಗಮಗಳನ್ನು ಖಾಸಗೀಕರಣ…

Read More
Kempegowda jayanthi will be celebrated in 28 vidhansabha constituency DK shivakumar

DK Shivakumar: ಬೆಂಗಳೂರಿನ 28 ಕ್ಷೇತ್ರಗಳಲ್ಲೂ ಕೆಂಪೇಗೌಡ ಜಯಂತಿ ಆಚರಣೆ: ಗಿನ್ನೆಸ್ ದಾಖಲೆಗಾಗಿ ಬಿಡಿಎ ವತಿಯಿಂದ 15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ!

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಜಯಂತಿಗೆ ಈ ಬಾರಿ ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ವಿಶೇಷ ಮೆರುಗು ನೀಡಿದೆ. ಇನ್ನು ಮುಂದೆ ಕೆಂಪೇಗೌಡ ಜಯಂತಿಯ ಆಚರಣೆಯು ಕೇವಲ ವಿಧಾನಸೌಧ ಅಥವಾ ಫ್ರೀಡಂ ಪಾರ್ಕ್‌ನಂತಹ ನಿರ್ದಿಷ್ಟ ಸ್ಥಳಗಳಿಗೆ ಮಾತ್ರ ಸೀಮಿತವಾಗಿರುವುದಿಲ್ಲ. ಬದಲಾಗಿ, ರಾಜಧಾನಿಯ ಒಟ್ಟು 28 ವಿಧಾನಸಭಾ ಕ್ಷೇತ್ರಗಳಲ್ಲೂ ಇದನ್ನು ಸರದಿಯಂತೆ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಜಯಂತಿ…

Read More
cm dk shivakumarwarning to excise department officers

DK Shivakumar: ಸರ್ಕಾರಕ್ಕೆ ಕೆಟ್ಟ ಹೆಸರು ತಂದರೆ ವರ್ಗಾವಣೆ ಕಡ್ಡಾಯ: ಅಬಕಾರಿ ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್!

ಬೆಂಗಳೂರು: “ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ವೃತ್ತಿಪರತೆಯನ್ನು ಪ್ರದರ್ಶಿಸುವ ಮೂಲಕ ಇಲಾಖೆ ಹಾಗೂ ಸರ್ಕಾರದ ಘನತೆಯನ್ನು ಎತ್ತಿಹಿಡಿಯಬೇಕು. ಒಂದು ವೇಳೆ ಸರ್ಕಾರದ ಗೌರವಕ್ಕೆ ಧಕ್ಕೆ ತರುವಂತಹ ಕೆಲಸ ಮಾಡಿದರೆ ಅದನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರಿಗಳಿಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶುಕ್ರವಾರ ನಡೆದ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇಲಾಖೆಯ…

Read More
HD kumaraswamy new accusation on dk shivakumar about giving ministry

HD Kumaraswamy: ಬೆಂಗಳೂರು: ಮಂತ್ರಿ ಸ್ಥಾನಕ್ಕೆ ‘ಪೇಮೆಂಟ್ ಕೋಟಾ’ ನಿಗದಿ; ಡಿಕೆಶಿ ವಿರುದ್ಧ ಭ್ರಷ್ಟಾಚಾರದ ಬಾಂಬ್ ಸಿಡಿಸಿದ ಹೆಚ್.ಡಿ. ಕುಮಾರಸ್ವಾಮಿ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನಾರಚನೆಯ ಕಸರತ್ತು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಭಾರಿ ಪ್ರಮಾಣದ ಭ್ರಷ್ಟಾಚಾರದ ಆರೋಪ ಹೊರಿಸಿದ್ದಾರೆ. “ಕರ್ನಾಟಕದಲ್ಲಿ ಸಚಿವ ಸ್ಥಾನ ಸಿಗಬೇಕಾದರೆ ಮ್ಯಾನೇಜ್‌ಮೆಂಟ್ ಇಲ್ಲವೇ ಪೇಮೆಂಟ್ ಕೋಟಾದಡಿ ಕೋಟ್ಯಂತರ ರೂಪಾಯಿ ಡೀಲ್ ಕುದುರಬೇಕು” ಎಂದು ಹೇಳುವ ಮೂಲಕ ಹೆಚ್‌ಡಿಕೆ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮಂತ್ರಿಮಂಡಲ ಬದಲಾವಣೆಯ ವಿಳಂಬದ…

Read More
Mallikarjun Kharge Scolds Congress Workers Shouting slogan dk shivakumar

Mallikarjun Kharge: ಯೂಸ್‌ಲೆಸ್ ಫೆಲೋಸ್: ಡಿಕೆಶಿ ಪರ ಘೋಷಣೆ ಕೂಗಿದ ಕಾರ್ಯಕರ್ತರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಗರಂ

ಬೆಂಗಳೂರು: ಇತ್ತೀಚೆಗೆ ನಡೆದ ಕಾಂಗ್ರೆಸ್ ಪಕ್ಷದ ಪ್ರಮುಖ ಕಾರ್ಯಕ್ರಮವೊಂದರಲ್ಲಿ ಹಿರಿಯ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಪಕ್ಷದ ಕಾರ್ಯಕರ್ತರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದ ನೂತನ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭ ಭಾನುವಾರ ನಡೆದಿತ್ತು. ಈ ವೇಳೆ ಸಭೆಯಲ್ಲಿದ್ದ ಕೆಲವು ಕಾರ್ಯಕರ್ತರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರವಾಗಿ ‘ಡಿಕೆ-ಡಿಕೆ’ ಎಂದು ಜೋರಾಗಿ ಘೋಷಣೆಗಳನ್ನು ಕೂಗಲು ಆರಂಭಿಸಿದರು. ಇದು ಮಲ್ಲಿಕಾರ್ಜುನ ಖರ್ಗೆ ಅವರ ಕೋಪಕ್ಕೆ…

Read More
dk shivakumar slams opposition leaders regarding Bidadi township

DK Shivakumar: ಕುಮಾರಸ್ವಾಮಿ ವಿರುದ್ಧ ಸಿಎಂ ಡಿಕೆಶಿ ವಾಗ್ದಾಳಿ: ‘ಭೂಮಿ ನೋಟಿಫೈ ಮಾಡಿದ್ದೇ ಜೆಡಿಎಸ್, ಈಗ ನಾಟಕ ಆಡುತ್ತಿದ್ದಾರೆ’

ಬೆಂಗಳೂರು: ಬಿಡದಿ ಭಾಗದಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ ನಡೆಯುತ್ತಿರುವ ಜಮೀನು ಸ್ವಾಧೀನ ಪ್ರಕ್ರಿಯೆ ಹಾಗೂ ಇದರ ವಿರುದ್ಧ ಜೆಡಿಎಸ್ ಹಮ್ಮಿಕೊಂಡಿರುವ ಹೋರಾಟದ ವಿರುದ್ಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಟೀಕೆಗಳಿಗೆ ಕಡಕ್ ಕೌಂಟರ್ ನೀಡಿರುವ ಸಿಎಂ, ವಿರೋಧ ಪಕ್ಷಗಳು ಕೇವಲ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಈ ಇಡೀ ವಿಷಯವನ್ನು ವಿವಾದ ಮಾಡುತ್ತಿವೆ ಎಂದು ಜರೆದಿದ್ದಾರೆ. ಕುಮಾರಸ್ವಾಮಿ ಆಧಾರ ರಹಿತ ಆರೋಪ ಬಿಡದಿ ಜಮೀನು ವಿಚಾರದಲ್ಲಿ ಕುಮಾರಸ್ವಾಮಿ…

Read More