DK Suresh: ಕಾಲ ಕೂಡಿ ಬರಲಿ ಎಂದು ಕಾಯುತ್ತಿದ್ದೇವೆ: ನಾಯಕತ್ವ ಬದಲಾವಣೆ ಕುರಿತು ಡಿ.ಕೆ. ಸುರೇಶ್ ಮಾರ್ಮಿಕ ಮಾತು
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64ನೇ ಜನ್ಮದಿನದ ಹೊಸ್ತಿಲಿನಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ‘ಅಧಿಕಾರ ಹಂಚಿಕೆ’ಯ ಚರ್ಚೆ ಮುನ್ನೆಲೆಗೆ ಬಂದಿದೆ. ಈ ವಿಶೇಷ ದಿನದಂದು ಹೈಕಮಾಂಡ್ನಿಂದ ಶುಭ ಸುದ್ದಿ ಸಿಗಲಿದೆಯೇ ಎಂಬ ಪ್ರಶ್ನೆಗೆ ಶಿವಕುಮಾರ್ ಅವರ ಸಹೋದರ, ಮಾಜಿ ಸಂಸದ ಡಿ.ಕೆ. ಸುರೇಶ್ (DK Suresh) ಅವರು ಕುತೂಹಲಕಾರಿ ಪ್ರತಿಕ್ರಿಯೆ ನೀಡಿದ್ದಾರೆ. 64ನೇ ವಸಂತಕ್ಕೆ ಕಾಲಿಡುವುದೇ ಶುಭ ಸುದ್ದಿ: ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಸುರೇಶ್, “ಶಿವಕುಮಾರ್ ಅವರಿಗೆ 63 ವರ್ಷ ಮುಗಿದು 64ನೇ ವರ್ಷಕ್ಕೆ ಕಾಲಿಡುತ್ತಿರುವುದೇ…
