Supreme Court: ರಾಮ ಮಂದಿರ ನಿಧಿ ಅಕ್ರಮ ಆರೋಪ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವಿವಾದ; ಸೋಮವಾರ ತುರ್ತು ವಿಚಾರಣೆ ಸಾಧ್ಯತೆ
ನವದೆಹಲಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರಕ್ಕೆ ಸಾರ್ವಜನಿಕರಿಂದ ಸಂಗ್ರಹವಾಗಿರುವ ಕೋಟ್ಯಂತರ ರೂಪಾಯಿ ದೇಣಿಗೆಯ ದುರುಪಯೋಗ ಹಾಗೂ ಆರ್ಥಿಕ ಅವ್ಯವಹಾರದ ಆರೋಪ ಈಗ ದೇಶದ ಅತ್ಯುನ್ನತ ನ್ಯಾಯಾಲಯದ ಅಂಗಳ ತಲುಪಿದೆ. ಈ ಹಗರಣದ ಬಗ್ಗೆ ತಕ್ಷಣ ಎಫ್ಐಆರ್ ದಾಖಲಿಸಿ, ಸಿಬಿಐ ನೇತೃತ್ವದ ತಜ್ಞರ ತಂಡದಿಂದ ನಿಗದಿತ ಅವಧಿಯೊಳಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಜೂನ್ 29ರ ಸೋಮವಾರದಂದು ನ್ಯಾಯಾಲಯದ ಮುಂದೆ ಪ್ರಸ್ತಾಪಿಸುವಂತೆ ಸುಪ್ರೀಂ ಕೋರ್ಟ್ (Supreme Court) ಅರ್ಜಿದಾರರಿಗೆ ಸೂಚಿಸಿದೆ. ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ…
