MP Renukacharya: ರಾಜ್ಯ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸದ್ದು: ಸದಾನಂದಗೌಡರ ವಿರುದ್ಧ ಮಾಜಿ ಸಚಿವ ರೇಣುಕಾಚಾರ್ಯ ಬಹಿರಂಗ ಆಕ್ರೋಶ!
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಪದಚ್ಯುತಗೊಳಿಸುವ ಕುರಿತು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರದ್ದು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆದ ಬೆನ್ನಲ್ಲೇ, ಕಮಲ ಪಾಳಯದ ಆಂತರಿಕ ಭಿನ್ನಮತ ಮತ್ತೆ ಬೀದಿಗೆ ಬಂದಿದೆ. ಈ ಸ್ಫೋಟಕ ಆಡಿಯೋ ವಿಚಾರವಾಗಿ ತೀವ್ರ ಆಕ್ರೋಶ ಹೊರಹಾಕಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, (MP Renukacharya) ಡಿ.ವಿ. ಸದಾನಂದಗೌಡರ ವಿರುದ್ಧ ಕಟು ಶಬ್ದಗಳಿಂದ ವಾಗ್ದಾಳಿ ನಡೆಸಿದ್ದಾರೆ. ಬಿಎಸ್ವೈ ಕೃಪೆಯಿಂದ ಸಿಎಂ ಆದದ್ದನ್ನು ಮರೆಯಬೇಡಿ! ವಿಜಯೇಂದ್ರ ವಿರುದ್ಧ ನಡೆಯುತ್ತಿದೆ ಎನ್ನಲಾದ…
