ED Raid: ಮೈಸೂರು: ಸಚಿವ ಸತೀಶ್ ಜಾರಕಿಹೊಳಿ ಭಾವಮೈದ, ಅಬಕಾರಿ ಜಂಟಿ ಆಯುಕ್ತ ಮಂಜುನಾಥ್ಗೆ ಇಡಿ ಶಾಕ್
ಮೈಸೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ತಂಗಿಯ ಗಂಡ ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾದ ವೈ. ಮಂಜುನಾಥ್ ಅವರಿಗೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಭಾರಿ ಬಿಗ್ ಶಾಕ್ (ED Raid) ನೀಡಿದ್ದಾರೆ. ಅಕ್ರಮ ಹಣ ವರ್ಗಾವಣೆ (Money Laundering) ಹಾಗೂ ವಿದೇಶದಲ್ಲಿ ಕಾನೂನುಬಾಹಿರವಾಗಿ ಬಂಡವಾಳ ಹೂಡಿಕೆ ಮಾಡಿರುವ ಗಂಭೀರ ದೂರಿನ ಹಿನ್ನೆಲೆಯಲ್ಲಿ ಮೈಸೂರು, ಬೆಂಗಳೂರು ಹಾಗೂ ಬೆಳಗಾವಿ ಸೇರಿದಂತೆ ದೇಶದ ಒಟ್ಟು ಆರು ಪ್ರಮುಖ ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲಕ್ಕೆ…
