Tamil Nadu: ಅನ್ನದಾತನ ಮನವಿಗೆ ಸ್ಪಂದಿಸಿದ ವಿಜಯ್ ಸರ್ಕಾರ: 75 ಸಾವಿರಕ್ಕೂ ಮೀರಿದ ಸಾಲಕ್ಕೆ ₹35,000 ವಿನಾಯಿತಿ!
ಚೆನ್ನೈ: ತಮಿಳುನಾಡಿನ (Tamil Nadu) ಮುಖ್ಯಮಂತ್ರಿ ದಳಪತಿ ವಿಜಯ್ ಅವರು ರೈತರಿಗೆ ಭರ್ಜರಿ ಕೊಡುಗೆಯೊಂದನ್ನು ಘೋಷಿಸಿದ್ದು, ಸಹಕಾರಿ ಬ್ಯಾಂಕ್ಗಳಲ್ಲಿ ಪಡೆದಿರುವ ಬೆಳೆ ಸಾಲ ಮನ್ನಾ ಯೋಜನೆಯನ್ನು ಗಣನೀಯವಾಗಿ ವಿಸ್ತರಿಸಿದ್ದಾರೆ. ಮಂಗಳವಾರ ಅಧಿಕೃತ ಪ್ರಕಟಣೆ ಹೊರಡಿಸಿರುವ ವಿಜಯ್ ಸರ್ಕಾರ, ಭೂಮಿಯ ವಿಸ್ತೀರ್ಣದ ಮಿತಿ ಇಲ್ಲದೆ ಎಲ್ಲಾ ವರ್ಗದ ರೈತರು 2025ರ ಮೇ 1 ರಿಂದ 2026ರ ಫೆಬ್ರವರಿ 28ರ ಅವಧಿಯಲ್ಲಿ ಸಹಕಾರಿ ಬ್ಯಾಂಕ್ಗಳಿಂದ ಪಡೆದಿರುವ 75,000 ರೂಪಾಯಿ ವರೆಗಿನ ಬೆಳೆ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು ಎಂದು ತಿಳಿಸಿದೆ….
