GBA: ಬಡ ವ್ಯಾಪಾರಿಗಳ ಅಂಗಡಿಗಳ ಮೇಲೆ ಜೆಸಿಬಿ ದಾಳಿ: ಜಿಬಿಎ ದರ್ಪದ ವಿರುದ್ಧ ವಾಟಾಳ್ ನಾಗರಾಜ್ ವಿನೂತನ ಪ್ರತಿಭಟನೆ!
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಫುಟ್ಪಾತ್ ಬದಿಯ ಸಣ್ಣ ಮತ್ತು ಬಡ ವ್ಯಾಪಾರಿಗಳ ಅಂಗಡಿಗಳನ್ನು ಜೆಸಿಬಿ ಮೂಲಕ ತೆರವುಗೊಳಿಸುತ್ತಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಕ್ರಮದ ವಿರುದ್ಧ ಕನ್ನಡ ಚಳವಳಿ ವಾಟಾಳ್ ಪಕ್ಷವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ದಬ್ಬಾಳಿಕೆಯನ್ನು ಖಂಡಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಹಳೇ ಬಿಬಿಎಂಪಿ ಕಚೇರಿ ಬಳಿ ಇರುವ ಜಿಬಿಎ ಕಚೇರಿ ಮುಂಭಾಗದಲ್ಲಿ ಬೃಹತ್ ‘ಗುದ್ದಲಿ ಮೆರವಣಿಗೆ’ ನಡೆಸುವ ಮೂಲಕ ವಿನೂತನವಾಗಿ ಪ್ರತಿಭಟಿಸಲಾಯಿತು. ಸರ್ಕಾರದ ವಿರುದ್ಧ ಕಿಡಿಕಾರಿದ ವಾಟಾಳ್…
