TOP NEWS
Minister krishna byre gowda statement about GBA footpath clearance

Bengaluru: ಬೆಂಗಳೂರು ಫುಟ್‌ಪಾತ್ ಕ್ಲಿಯರೆನ್ಸ್: ಸಾರ್ವಜನಿಕರ ಜೀವ ರಕ್ಷಣೆಗೆ ಮೊದಲ ಆದ್ಯತೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ (ಜಿಬಿಎ) ಮಿತಿಯಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ಮುಕ್ತಗೊಳಿಸುವ ಕಾರ್ಯಾಚರಣೆ ಚುರುಕುಗೊಂಡಿದ್ದು, ಈ ಪ್ರಕ್ರಿಯೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹೊಟ್ಟೆಯ ಮೇಲೆ ಹೊಡೆಯುವುದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ (Bengaluru) ತಿಳಿಸಿದ್ದಾರೆ. ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಮಾತನಾಡಿದ ಅವರು, ಪ್ರಮುಖ ಲಿಂಕ್ ರಸ್ತೆಗಳಿಂದ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗದಂತೆ ಒಳಗಿನ ವಾರ್ಡ್ ರಸ್ತೆಗಳಿಗೆ ಮಾತ್ರ ಇವರನ್ನು ಶಿಫ್ಟ್ ಮಾಡಲಾಗುವುದು. ಫುಟ್‌ಪಾತ್‌ಗಳ ಮೇಲೆ ಅಡ್ಡಲಾಗಿ ನಿಲ್ಲಿಸುವ ವಾಹನಗಳು, ಅನಧಿಕೃತ ಪಾರ್ಕಿಂಗ್ ಮತ್ತು ಕಟ್ಟಡಗಳ ಮುಂದೆ…

Read More
Bengaluru footpath will be cleared soon krishna byre gowda

Bengaluru: ಶೇ. 15 ರಷ್ಟು ಫುಟ್‌ಪಾತ್ ತೆರವಿಗೆ ನಿರ್ಧಾರ: ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಪಾದಚಾರಿಗಳ ಹಿತದೃಷ್ಟಿಯಿಂದ ಹಾಗೂ ಸುಪ್ರೀಂ ಕೋರ್ಟ್‌ನ ಕಟ್ಟುನಿಟ್ಟಿನ ಆದೇಶದನ್ವಯ ಫುಟ್‌ಪಾತ್ (ಕಾಲುದಾರಿ) ಒತ್ತುವರಿ ತೆರವುಗೊಳಿಸುವ ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲುದಾರಿಗಳ ಅಕ್ರಮ ಆಕ್ರಮಣದಿಂದಾಗಿ ನಿತ್ಯ ಸಂಕಷ್ಟ ಎದುರಿಸುತ್ತಿರುವ ಸಾರ್ವಜನಿಕರ ಹಿತ ಕಾಯಲು ಸರ್ಕಾರ ಈ ಮಹತ್ವದ ಕ್ರಮ ಕೈಗೊಂಡಿದೆ. ಹೀಗಾಗಿ ರಸ್ತೆಬದಿಯ ವ್ಯಾಪಾರಿಗಳು ಸರ್ಕಾರದೊಂದಿಗೆ ಕೈಜೋಡಿಸಿ ಸಹಕರಿಸಬೇಕು ಎಂದು ವಿನಂತಿಸಿದರು. 2,000 ಕಿಲೋಮೀಟರ್ ಒತ್ತುವರಿ ಮುಕ್ತ ರಾಜಧಾನಿಯಲ್ಲಿ…

Read More
krishna byre gowda takes class to GBA officers regarding roads

Krishna Byre Gowda: ಹೈಕಮಾಂಡ್ ಸಂಧಾನಕ್ಕೆ ಒಲಿದ ಕೃಷ್ಣ ಬೈರೇಗೌಡ: ಬೆಂಗಳೂರು ನಗರಾಭಿವೃದ್ಧಿ ಜವಾಬ್ದಾರಿ ಸ್ವೀಕರಿಸಿದ ದಿನವೇ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್!

ಬೆಂಗಳೂರು: ಖಾತೆ ಹಂಚಿಕೆಯಲ್ಲಿ ತಮಗಾಗಿದ್ದ ಅಸಮಾಧಾನವನ್ನು ಬದಿಗಿಟ್ಟು ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು ಕೊನೆಗೂ ತಮ್ಮ ಇಲಾಖೆಯ ಅಧಿಕಾರ ಸೂತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ನಡೆಸಿದ ಸರಣಿ ಸಂಧಾನ ಸಫಲವಾದ ಬೆನ್ನಲ್ಲೇ, ಜೂನ್ 16ರಂದು ಸಚಿವರು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಪ್ರಮುಖ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳ ಉನ್ನತ ಮಟ್ಟದ ಸಭೆ ನಡೆಸುವ ಮೂಲಕ ಆಡಳಿತ ಆರಂಭಿಸಿದರು. ಇಲಾಖೆಯ ಚುಕ್ಕಾಣಿ ಹಿಡಿದ ಮೊದಲ…

Read More
Supreme court gave final time for GBA election

GBA: ಬೆಂಗಳೂರಿನ ಸ್ಥಳೀಯ ಚುನಾವಣೆಗಳಿಗೆ ಸುಪ್ರೀಂ ಕೋರ್ಟ್ ಗಡುವು: ಆಗಸ್ಟ್ 31ರ ಒಳಗೆ ಪ್ರಕ್ರಿಯೆ ಮುಗಿಸಲು ರಾಜ್ಯ ಸರ್ಕಾರಕ್ಕೆ ಆದೇಶ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಗೆ ಒಳಪಡುವ ಐದೂ ಮಹಾನಗರ ಪಾಲಿಕೆಗಳ ಚುನಾವಣೆಗೆ ಸುಪ್ರೀಂ ಕೋರ್ಟ್ ಮಹತ್ವದ ದಿನಾಂಕವನ್ನು ನಿಗದಿಪಡಿಸಿದೆ. ಬರುವ ಆಗಸ್ಟ್ 31 ರ ಒಳಗಾಗಿ ಎಲ್ಲಾ ಪಾಲಿಕೆಗಳ ಚುನಾವಣಾ ಪ್ರಕ್ರಿಯೆಗಳನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಉನ್ನತ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಅಂತಿಮ ಗಡುವು ನೀಡಿದೆ. ಚುನಾವಣಾ ಸಿದ್ಧತೆಗಳಿಗಾಗಿ ತಮಗೆ ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಕರ್ನಾಟಕ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗವು ಜಂಟಿಯಾಗಿ…

Read More
SIR will be reason for GBA election delay

GBA: ಗ್ರೇಟರ್ ಬೆಂಗಳೂರು ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ? ‘SIR’ ಕಾರ್ಯದ ನಡುವೆ ಸಿಬ್ಬಂದಿ ಕೊರತೆಯ ಆತಂಕ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣಾ ಕಣ ಸಜ್ಜಾಗುವುದು ಮತ್ತಷ್ಟು ವಿಳಂಬವಾಗುವ ಮುನ್ಸೂಚನೆ ಸಿಕ್ಕಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಮುಂದಿಟ್ಟುಕೊಂಡು, ಚುನಾವಣೆಯನ್ನು ಮುಂದೂಡುವಂತೆ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಆಡಳಿತಾತ್ಮಕ ಅಡಚಣೆಗಳ ನೆಪ: ಸದ್ಯ ರಾಜ್ಯಾದ್ಯಂತ ಮತದಾರರ ಪಟ್ಟಿ ಅಪ್‌ಡೇಟ್ ಮಾಡುವ ಕೆಲಸ ಆರಂಭ ಆಗುತ್ತದೆ, ಬಹುತೇಕ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಾರೆ. ಇಂತಹ…

Read More
DK Shivakumar about GBA election it will happen soon

DK Shivakumar: ಶೀಘ್ರದಲ್ಲಿ ಜಿಬಿಎ ಚುನಾವಣೆ: ಡಿಕೆ ಶಿವಕುಮಾರ್

ಬೆಂಗಳೂರು: ಜಿಬಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಕೋರ್ಟ್ ನಿರ್ದೇಶನದ ಪ್ರಕಾರ ನಡೆಯುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು. ಜಿಬಿಎ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಜಿಬಿಎ ಚುನಾವಣೆ ಯಾವಾಗ ನಡೆಯಲಿದೆ ಎಂಬ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು. ಈ ವರ್ಷ ಜಿಬಿಎ ಆದಾಯದ ನಿರೀಕ್ಷೆ ಏನಿದೆ ಎಂದು ಕೇಳಿದಾಗ, “ಆದಾಯ ಬರಲಿ ನೋಡೋಣ. ನಾವು ಆದಾಯದ ಲೆಕ್ಕ ಹಾಕುತ್ತಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ…

Read More
Bengaluru people curiosity increased regarding dk shivakumar big announcement on may 13

DK Shivakumar: ನಾಳೆ ಬೆಂಗಳೂರು ನಿವಾಸಿಗಳಿಗೆ ಸಿಗಲಿದೆ ಗುಡ್‌ನ್ಯೂಸ್‌, ಏನಿದು ಡಿಕೆಶಿ ಗ್ಯಾರಂಟಿ?

ಬೆಂಗಳೂರು: ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ರಾಜಧಾನಿಯ ಜನತೆಗೆ ಹೊಸ ‘ಗ್ಯಾರಂಟಿ’ಗಳನ್ನು ನೀಡುವ ಸುಳಿವು ನೀಡಿದ್ದಾರೆ. ಸೋಮವಾರ ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿಗಾಗಿ ವಿಶೇಷ ಯೋಜನೆಗಳನ್ನು ಸಿದ್ಧಪಡಿಸಲಾಗಿದ್ದು, ಇದರ ಸಂಪೂರ್ಣ ವಿವರಗಳನ್ನು ಮೇ 13ರಂದು ಹಂಚಿಕೊಳ್ಳಲಾಗುವುದು ಎಂದು ತಿಳಿಸಿದರು. ಈಗಾಗಲೇ ಮೇ 16ರಿಂದ ‘ನನ್ನ ಖಾತೆ’ ಅಭಿಯಾನ ಮತ್ತು ಪ್ರತಿ ಶನಿವಾರ ನಗರಾದ್ಯಂತ ‘ಖಾತೆ ಮೇಳ’ಗಳನ್ನು ನಡೆಸುವುದಾಗಿ ಘೋಷಿಸಿರುವ ಅವರು, ಈಗ ನೀಡಲಿರುವ ಹೊಸ ಆಶ್ವಾಸನೆಗಳು ಅದರ ಭಾಗವೇ…

Read More