Bagalkot: ಶಾಲಾ ಚಾವಣಿ ಕುಸಿತ ಪ್ರಕರಣ: ಪ್ರಭಾರಿ ಹೆಚ್ಎಂ ಸೇರಿ ಇಬ್ಬರು ಇಂಜಿನಿಯರ್ಗಳು ಅಮಾನತು!
ಬಾಗಲಕೋಟೆ: ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದ ವೇಳೆಯಲ್ಲೇ ಕೊಠಡಿಯ ಮೇಲ್ಛಾವಣಿಯ ಕಾಂಕ್ರೀಟ್ ಹಾಗೂ ಪ್ಲಾಸ್ಟರಿಂಗ್ ಕುಸಿದು ಬಿದ್ದು ವಿದ್ಯಾರ್ಥಿಗಳು ಗಾಯಗೊಂಡ (Bagalkot) ಘಟನೆಗೆ ಸಂಬಂಧಿಸಿದಂತೆ, ಕರ್ತವ್ಯ ಲೋಪ ಎಸಗಿದ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಹಾಗೂ ಇಬ್ಬರು ಇಂಜಿನಿಯರ್ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ದುರಂತ ತಪ್ಪಿದರೂ ಮಕ್ಕಳಿಗೆ ಗಾಯ ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 2ರಂದು ದಿನನಿತ್ಯದಂತೆ ತರಗತಿಗಳು ನಡೆಯುತ್ತಿದ್ದವು. ಈ ವೇಳೆ ಏಕಾಏಕಿ ಶಾಲಾ ಕೊಠಡಿಯ ಮೇಲ್ಛಾವಣಿಯ ಸಿಮೆಂಟ್…
