Gruhalakshmi: ಅನರ್ಹರು, ಮೃತರ ಖಾತೆಗೆ ಹಣ ವರ್ಗಾವಣೆ ಆರೋಪಕ್ಕೆ ಬ್ರೇಕ್: ಗೃಹಲಕ್ಷ್ಮಿ ಯೋಜನೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಧಿಕೃತ ಸ್ಪಷ್ಟನೆ!
ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ (Gruhalakshmi) ಯೋಜನೆಯಡಿ ಅನರ್ಹರು ಹಾಗೂ ಮರಣ ಹೊಂದಿದ ಫಲಾನುಭವಿಗಳ ಖಾತೆಗೆ ಹಣ ಪಾವತಿಯಾಗುತ್ತಿದೆ ಮತ್ತು ಸಿಎಜಿ ಲೆಕ್ಕ ತಪಾಸಣೆ ವರದಿಯಲ್ಲಿ ಆಕ್ಷೇಪಣೆಗಳು ವ್ಯಕ್ತವಾಗಿವೆ ಎಂಬ ವರದಿಗಳು ಭಾರಿ ಸದ್ದು ಮಾಡಿದ್ದವು. ಈ ಎಲ್ಲಾ ಗೊಂದಲಗಳು ಮತ್ತು ಆರೋಪಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸುದೀರ್ಘ ಹಾಗೂ ಸಮಗ್ರ ಸ್ಪಷ್ಟನೆಯನ್ನು ನೀಡಿದೆ. ಯೋಜನೆಯು ಸಂಪೂರ್ಣವಾಗಿ ನಿಯಮಾನುಸಾರ ಮತ್ತು ಪಾರದರ್ಶಕವಾಗಿ ಅನುಷ್ಠಾನಗೊಳ್ಳುತ್ತಿದ್ದು, ಯಾವುದೇ ಅಕ್ರಮಕ್ಕೆ ಇಲ್ಲಿ ಅವಕಾಶವಿಲ್ಲ…
