Road Mishap: ಎಟಿಎಂ ಕ್ಯಾಶ್ ವಾಹನ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ರಸ್ತೆ ಅಪಘಾತ, ನಾಲ್ವರಿಗೆ ಗಂಭೀರ ಗಾಯ
ಹಾಸನ: ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Road Mishap) ಬೊಲೆರೋ ಪಿಕಪ್ನಲ್ಲಿದ್ದ ದಿನೇಶ್ (38) ಎಂಬುವರು ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ವಾಹನದಲ್ಲಿದ್ದ ಸುಬ್ರಮಣ್ಯ, ವೆಂಕಟರಮಣ, ಜಿತೇಂದ್ರ ಮತ್ತು ದುರ್ಗಾಪ್ರಸಾದ್ ಎಂಬ ನಾಲ್ವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಘಟನೆಯ ವಿವರ: ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಗಳೂರಿನಿಂದ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಎಟಿಎಂಗಳಿಗೆ ಹಣ ತಲುಪಿಸಲು…
