TOP NEWS
High Court ordered to Remove DK Shivakumar Cut Outs

DK Shivakumar: ಹೈಕೋರ್ಟ್ ಆವರಣದಲ್ಲಿದ್ದ ಬೃಹತ್ ಕಟೌಟ್‌ಗಳನ್ನು ಕಿತ್ತೆಸೆದ ಪೊಲೀಸರು!

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರ ಸ್ವೀಕರಿಸುವ ಐತಿಹಾಸಿಕ ಕ್ಷಣಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಬೆಂಗಳೂರಿನ ಹೈಕೋರ್ಟ್ ಅನಧಿಕೃತ ಫ್ಲೆಕ್ಸ್ ಹಾವಳಿ ವಿರುದ್ಧ ತೀವ್ರ ಕೆಂಗಣ್ಣು ಬೀರಿದೆ. ಜೂನ್ 3ರಂದು ನಡೆಯಲಿರುವ ಈ ಪಟ್ಟಾಭಿಷೇಕದ ಸಡಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೈಕೋರ್ಟ್ ಮತ್ತು ವಿಧಾನಸೌಧದ ಸುತ್ತಮುತ್ತ ಅಳವಡಿಸಿದ್ದ ಸಾಲು ಸಾಲು ದೈತ್ಯ ಕಟೌಟ್‌ಗಳು ಹಾಗೂ ಬ್ಯಾನರ್‌ಗಳನ್ನು ನ್ಯಾಯಾಧೀಶರ ಖಡಕ್ ಆದೇಶದ ಮೇರೆಗೆ ಅಧಿಕಾರಿಗಳು ಜಾಗದಲ್ಲೇ ತೆರವುಗೊಳಿಸಿದ್ದಾರೆ. ಕೊನೆಗೂ ಪಟ್ಟ ಗಿಟ್ಟಿಸಿಕೊಂಡ…

Read More
high court gives big shock to yogesh gowda case ex inspector chennakeshava tingrikar

High Court: ಧಾರವಾಡದ ಯೋಗೀಶ್ ಗೌಡ ಹತ್ಯೆ ಕೇಸ್: ಮಾಜಿ ತನಿಖಾಧಿಕಾರಿಗೆ ಸಿಗದ ರಿಲೀಫ್

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸಿದ ಆರೋಪದಡಿ ಶಿಕ್ಷೆಗೆ ಒಳಗಾಗಿರುವ ಮಾಜಿ ಪೊಲೀಸ್ ಅಧಿಕಾರಿ ಚನ್ನಕೇಶವ ಟಿಂಗರಿಕರ್ ಅವರಿಗೆ ಉನ್ನತ ನ್ಯಾಯಾಲಯದಲ್ಲಿ (High Court) ಆಘಾತ ಎದುರಾಗಿದೆ. ತಮಗೆ ವಿಧಿಸಲಾಗಿರುವ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ಹಾಗೂ ಜಾಮೀನು ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದೆ. ತನಿಖೆಯ ದಿಕ್ಕು ತಪ್ಪಿಸಿದ ಆರೋಪ ನ್ಯಾಯಮೂರ್ತಿಗಳಾದ ಎಚ್.ಪಿ. ಸಂದೇಶ್ ಹಾಗೂ ಪಿ. ಶ್ರೀಸುಧಾ ಅವರಿದ್ದ ನ್ಯಾಯಪೀಠವು ಈ ಅರ್ಜಿಯ…

Read More
supreme court notice about land dispute case in high courts

Supreme Court: “ಜಾಮೀನು ಅರ್ಜಿಗಳನ್ನು ಬಾಕಿ ಇಡಬೇಡಿ”: ಹೈಕೋರ್ಟ್‌ಗಳಿಗೆ ಸುಪ್ರೀಂ ಕೋರ್ಟ್‌ನಿಂದ ಕಟ್ಟುನಿಟ್ಟಿನ ಡೆಡ್‌ಲೈನ್!

ನವದೆಹಲಿ: ದೇಶದ ವಿವಿಧ ಉನ್ನತ ನ್ಯಾಯಾಲಯಗಳಲ್ಲಿ (High Courts) ಲಕ್ಷಾಂತರ ಜಾಮೀನು ಅರ್ಜಿಗಳು ವಿಲೇವಾರಿಯಾಗದೆ ಉಳಿದಿರುವ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವ್ಯಕ್ತಿಯ ಸ್ವಾತಂತ್ರ್ಯವನ್ನು ಕಾಪಾಡುವುದು ನ್ಯಾಯಾಂಗದ ಮೊದಲ ಆದ್ಯತೆಯಾಗಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಈ ಪ್ರಕ್ರಿಯೆಯನ್ನು ವೇಗಗೊಳಿಸಲು ಮಹತ್ವದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅಲಹಾಬಾದ್ ಮತ್ತು ಪಾಟ್ನಾ ಹೈಕೋರ್ಟ್‌ಗಳ ಸ್ಥಿತಿಗೆ ಕಳವಳ ಸಿಜೆಐ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರಿದ್ದ ಪೀಠವು ವಿಶೇಷವಾಗಿ ಉತ್ತರ ಪ್ರದೇಶ ಮತ್ತು ಬಿಹಾರದ…

Read More
High Court takes class to KKRTC on accident case

High Court: KKRTCಗೆ ಹೈಕೋರ್ಟ್‌ ತರಾಟೆ, 25 ಸಾವಿರ ದಂಡ

ಬೆಂಗಳೂರು: ಅಪಘಾತದ ಪ್ರಕರಣವೊಂದರಲ್ಲಿ ಸತ್ಯಾಂಶಗಳನ್ನು ಮುಚ್ಚಿಟ್ಟು, ನ್ಯಾಯಾಲಯದ ಹಾದಿ ತಪ್ಪಿಸಲು ಯತ್ನಿಸಿದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (KKRTC) ಹೈಕೋರ್ಟ್ (High Court) 25,000 ರೂಪಾಯಿ ದಂಡ ವಿಧಿಸಿ ಬಿಸಿ ಮುಟ್ಟಿಸಿದೆ. ಘಟನೆಯ ವಿವರ: 2023ರ ಜೂನ್ ತಿಂಗಳಲ್ಲಿ ಕಂದಾಯ ಇಲಾಖೆಯ ಉದ್ಯೋಗಿ ವಿನೋದ್ ಕುಮಾರ್ ಅವರು ಕೆಕೆಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಚಾಲಕ ಅತಿ ವೇಗವಾಗಿ ತಿರುವು ಪಡೆದ ಪರಿಣಾಮ ಬಸ್ಸಿನಿಂದ ಕೆಳಗೆ ಬಿದ್ದು ಮೃತಪಟ್ಟಿದ್ದರು. ಈ ಸಂಬಂಧ ಕಲಬುರಗಿಯ ನ್ಯಾಯಮಂಡಳಿಯು ಮೃತರ ಕುಟುಂಬಕ್ಕೆ 1.1…

Read More
high court gives stay to continue interview for valmiki university

High Court: ವಾಲ್ಮೀಕಿ ವಿವಿ ನೇಮಕಾತಿಗೆ ಹೈಕೋರ್ಟ್ ಬ್ರೇಕ್: 24 ಸಹಾಯಕ ಪ್ರಾಧ್ಯಾಪಕರ ಆಯ್ಕೆ ಪ್ರಕ್ರಿಯೆ ಸ್ಥಗಿತ

ರಾಯಚೂರು: ಸ್ಥಳೀಯ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ (High Court) ನಡೆಯುತ್ತಿದ್ದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ವಿಶ್ವವಿದ್ಯಾಲಯ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ. ನಿಯಮ ಉಲ್ಲಂಘನೆಯ ಆರೋಪ: ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಖಾಲಿ ಇದ್ದ 24 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಕೇವಲ ನೇರ ಸಂದರ್ಶನದ ಮೂಲಕ ಭರ್ತಿ ಮಾಡಲು ನಿರ್ಧರಿಸಿತ್ತು. ಆದರೆ, ಈ ಪ್ರಕ್ರಿಯೆಯಲ್ಲಿ…

Read More
High Court rules no business under tourist visa

High Court: ಪ್ರವಾಸಿ ವೀಸಾ ದುರುಪಯೋಗಪಡಿಸಿಕೊಂಡ ವಿದೇಶಿಗನಿಗೆ ಹೈಕೋರ್ಟ್ ಚಾಟಿ

ಬೆಂಗಳೂರು: ಪ್ರವಾಸಿ ವೀಸಾದಲ್ಲಿ ಭಾರತಕ್ಕೆ ಆಗಮಿಸಿ ನಿಯಮಬಾಹಿರವಾಗಿ ಉದ್ಯಮ ಮತ್ತು ಆಸ್ತಿ ಖರೀದಿ ವ್ಯವಹಾರಗಳಲ್ಲಿ ತೊಡಗಿದ್ದ ಫ್ರಾನ್ಸ್ ಮೂಲದ ವ್ಯಕ್ತಿಗೆ ಕರ್ನಾಟಕ ಹೈಕೋರ್ಟ್ (High Court) ಬಿಸಿ ಮುಟ್ಟಿಸಿದೆ. ವೀಸಾ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ನೀಡಿದ್ದ ‘ದೇಶ ಬಿಟ್ಟು ತೆರಳಿ’ ಎಂಬ ನೋಟಿಸ್ ಅನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಟೂರಿಸ್ಟ್ ವೀಸಾದಲ್ಲೇ 15 ವರ್ಷಗಳ ವಾಸ್ತವ್ಯ: ಫ್ರಾನ್ಸ್ ಪ್ರಜೆಯಾದ ಕ್ರಿಸ್ಟೋಫೆ ಸ್ಟೆಫಾನ್ ಕಳೆದ 15 ವರ್ಷಗಳಿಂದ ಪ್ರವಾಸಿ ವೀಸಾದ ಆಧಾರದ ಮೇಲೆ…

Read More
Divorce allowed without marriage registration orders Karnataka High court

High Court: ವಿವಾಹ ನೋಂದಣಿಯಾಗದಿದ್ದರೂ ವಿಚ್ಛೇದನ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ವಿಶೇಷ ವಿವಾಹ ಕಾಯ್ದೆ 1954ರ ಅಡಿಯಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಲು ಮದುವೆಯ ಅಧಿಕೃತ ನೋಂದಣಿ ಕಡ್ಡಾಯವಲ್ಲ ಎಂದು ಕರ್ನಾಟಕ ಹೈಕೋರ್ಟ್ (High Court) ಮಹತ್ವದ ಸ್ಪಷ್ಟನೆ ನೀಡಿದೆ. ವಿವಾಹ ನೋಂದಣಿಯಾಗಿಲ್ಲ ಎಂಬ ಕಾರಣಕ್ಕೆ ವಿಚ್ಛೇದನ ಅರ್ಜಿಯನ್ನು ತಿರಸ್ಕರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಏನಿದು ಪ್ರಕರಣ? ಪರಿಶಿಷ್ಟ ಪಂಗಡಕ್ಕೆ ಸೇರಿದ ದಂಪತಿಯ ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಮನ್ಮಥ ರಾವ್ ಅವರ ಪೀಠವು ಈ ಆದೇಶ ನೀಡಿದೆ. ಈ ದಂಪತಿಗಳು 2006ರಲ್ಲಿ ತಮ್ಮ…

Read More