BY Vijayendra: ಹಿಜಾಬ್ಗೆ ಕಾಂಗ್ರೆಸ್ ಅಸ್ತು: “ಅಲ್ಪಸಂಖ್ಯಾತರ ಓಲೈಕೆಗಾಗಿ ಸರ್ಕಾರದಿಂದ ಷಡ್ಯಂತ್ರ” ಎಂದು ಗುಡುಗಿದ ವಿಜಯೇಂದ್ರ
ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ಗೆ ಹಸಿರು ನಿಶಾನೆ ತೋರಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಕಿಡಿಹೊತ್ತಿಸಿದ್ದಾರೆ. ಸರ್ಕಾರದ ಈ ನಡೆಯು ರಾಜ್ಯದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಎಂದು ಅವರು ನೇರ ವಾಗ್ದಾಳಿ ನಡೆಸಿದ್ದಾರೆ. ಆಡಳಿತ ವೈಫಲ್ಯ ಮುಚ್ಚಿಡಲು ಷಡ್ಯಂತ್ರ: ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, “ರಾಜ್ಯ ಸರ್ಕಾರಕ್ಕೆ ಜನಹಿತಕ್ಕಿಂತ ರಾಜಕೀಯವೇ ಮುಖ್ಯವಾಗಿದೆ. ಆಡಳಿತದ ಮೇಲೆ ಹಿಡಿತ ಕಳೆದುಕೊಂಡಿರುವ ಇವರು, ಜನಸಾಮಾನ್ಯರ ಗಮನವನ್ನು ಬೇರೆಡೆ ಸೆಳೆಯಲು ಧರ್ಮಗಳ ನಡುವೆ ಕಲಹ…
