Weather: ರಾಜ್ಯಾದ್ಯಂತ ಆವರಿಸಿದ ಮುಂಗಾರು: ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ಭಾರಿ ಮಳೆಯ ‘ರೆಡ್ ಅಲರ್ಟ್’!
ಬೆಂಗಳೂರು: ನೈಋತ್ಯ ಮುಂಗಾರು ಮಾರುತಗಳು ಈಗ ಇಡೀ ಕರ್ನಾಟಕ ರಾಜ್ಯವನ್ನು ಸಂಪೂರ್ಣವಾಗಿ ಆವರಿಸಿಕೊಂಡಿವೆ. ಈ ಕುರಿತು (Weather) ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರದಂದು ಅಧಿಕೃತ ಪ್ರಕಟಣೆ ಹೊರಡಿಸಲಿದೆ. ರಾಜ್ಯದ ಈಶಾನ್ಯ ತುದಿಯಲ್ಲಿರುವ ಬೀದರ್ ಜಿಲ್ಲೆಗೆ ಭಾನುವಾರ ಮುಂಗಾರು ಮಳೆ ತಲುಪುವ ಮೂಲಕ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವರುಣನ ಸಿಂಚನವಾದಂತಾಗಿದೆ. ಬೀದರ್ಗೆ ಹೊಂದಿಕೊಂಡಿರುವ ಕಲಬುರಗಿ ಜಿಲ್ಲೆಗೆ ಶನಿವಾರವೇ ಮುಂಗಾರು ಪ್ರವೇಶಿಸಿತ್ತು ಎಂದು ಹವಾಮಾನ ಇಲಾಖೆ ಖಚಿತಪಡಿಸಿದೆ. ಮುಂಗಾರು ಇಡೀ ರಾಜ್ಯಕ್ಕೆ ವ್ಯಾಪಿಸಿರುವ ಬೆನ್ನಲ್ಲೇ ಕರಾವಳಿ ಮತ್ತು ಮಲೆನಾಡು…
