Supreme Court: ಅವಿಭಕ್ತ ಕುಟುಂಬಗಳ ಕಣ್ಮರೆಗೆ ಸುಪ್ರೀಂ ಕಳವಳ: ಮಕ್ಕಳ ಕೈಗೆ ಗ್ಯಾಜೆಟ್ ಇಡುವ ಪೋಷಕರಿಗೆ ಕೋರ್ಟ್ ಗಂಭೀರ ಎಚ್ಚರಿಕೆ
ನವದೆಹಲಿ: ಭಾರತದ ಸಾಂಪ್ರದಾಯಿಕ ಅವಿಭಕ್ತ ಕುಟುಂಬ ವ್ಯವಸ್ಥೆಯು ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ (Supreme Court) ತೀವ್ರ ಕಳವಳ ವ್ಯಕ್ತಪಡಿಸಿದೆ. ಜಂಟಿ ಕುಟುಂಬಗಳ ಕಣ್ಮರೆ ಮತ್ತು ಮಕ್ಕಳ ಪಾಲನೆಗಾಗಿ ಪೋಷಕರು ಗ್ಯಾಜೆಟ್ಗಳ ಮೇಲೆ ಅತಿಯಾಗಿ ಅವಲಂಬಿತವಾಗುತ್ತಿರುವುದು ಭವಿಷ್ಯದಲ್ಲಿ ತೀವ್ರ ಸಾಮಾಜಿಕ ಪರಿಣಾಮಗಳನ್ನು ಬೀರಬಹುದು ಎಂದು ಗಂಭೀರ ಎಚ್ಚರಿಕೆ ನೀಡಿದೆ. ಹನಿಮೂನ್ ವೇಳೆಯಲ್ಲಿ ಪತಿಯ ಕೊಲೆಗೆ ಸಂಚು ರೂಪಿಸಿದ ಆರೋಪ ಹೊತ್ತಿರುವ ಸೋನಂ ರಘುವಂಶಿ ಎಂಬಾಕೆಯ ಹೈಪ್ರೊಫೈಲ್ ‘ರಾಜಾ ರಘುವಂಶಿ ಹತ್ಯೆ ಪ್ರಕರಣ’ದ ಮೇಲ್ಮನವಿ ವಿಚಾರಣೆ ನಡೆಸುವ…
