High Court: ‘ಐಎಎಸ್ ಅಧಿಕಾರಿಯನ್ನು ಪಾಕಿಸ್ತಾನಿ ಎಂದವರನ್ನು ಬಿಡಲು ಸಾಧ್ಯವಿಲ್ಲ’: ಬಿಜೆಪಿ ಎಂಎಲ್ಸಿಗೆ ಹೈಕೋರ್ಟ್ ತೀವ್ರ ತರಾಟೆ!
ಬೆಂಗಳೂರು: ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿಯನ್ನು ಉಲ್ಲೇಖಿಸಿ, “ಅವರು ಭಾರತೀಯರೋ ಅಥವಾ ಪಾಕಿಸ್ತಾನಿಯೋ?” ಎಂದು ಪ್ರಶ್ನಿಸಿದ್ದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರ ಹೇಳಿಕೆ ವಿರುದ್ಧ ಹೈಕೋರ್ಟ್ ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಇಂತಹ ಹೇಳಿಕೆಗಳನ್ನು ನೀಡಿದವರನ್ನು ಸುಮ್ಮನೆ ಬಿಡಲು ಸಾಧ್ಯವಿಲ್ಲ ಹಾಗೂ ಯಾವುದೇ ಕಾರಣಕ್ಕೂ ಇದನ್ನು ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ (High Court) ಅತ್ಯಂತ ಕಟುವಾಗಿ ಹೇಳಿದೆ. ಹುದ್ದೆಯಲ್ಲಿದ್ದುಕೊಂಡು ಈ ರೀತಿ ಮಾತನಾಡಿರುವುದು ಸರಿಯಲ್ಲ ಹಿರಿಯ ಐಎಎಸ್ ಅಧಿಕಾರಿ…
