Belagavi: ಸರ್ಕಾರಿ ಆದೇಶದ ಪ್ರತಿ ಹರಿದು ಎಂಇಎಸ್ ಪುಂಡಾಟ; ಕರವೇ ಆಕ್ರೋಶ, ಸಂಘಟನೆ ನಿಷೇಧಕ್ಕೆ ಆಗ್ರಹ
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ (Belagavi) ಮಹಾರಾಷ್ಟ್ರ ಏಕೀಕರಣ ಸಮಿತಿಯ (MES) ಕಾರ್ಯಕರ್ತರು ಮತ್ತೊಮ್ಮೆ ತಮ್ಮ ಗೂಂಡಾಗಿರಿ ಪ್ರವೃತ್ತಿಯನ್ನು ಮುಂದುವರಿಸಿದ್ದಾರೆ. ರಾಜ್ಯಾದ್ಯಂತ ಕನ್ನಡವನ್ನು ಕಡ್ಡಾಯಗೊಳಿಸಿರುವ ಸರ್ಕಾರದ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಎಂಇಎಸ್ ಕಾರ್ಯಕರ್ತರು, ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲೇ ಭಾರೀ ಗದ್ದಲ ಸೃಷ್ಟಿಸಿದ್ದಾರೆ. ಸ್ಥಳದಲ್ಲೇ ರಕ್ಷಣಾ ಸಿಬ್ಬಂದಿ ಇದ್ದರೂ ಲೆಕ್ಕಿಸದೆ, ಸರ್ಕಾರದ ಅಧಿಕೃತ ಸುತ್ತೋಲೆಯನ್ನು ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ. ಅದರೊಂದಿಗೆ, ಗಡಿ ಪ್ರದೇಶಗಳಲ್ಲಿ ಮರಾಠಿ ಭಾಷೆಯಲ್ಲೇ ಸರ್ಕಾರಿ ದಾಖಲೆಗಳು ಹಾಗೂ ನಾಮಫಲಕಗಳನ್ನು ಅಳವಡಿಸಬೇಕು ಎಂದು ಪಟ್ಟು…
