DK Shivakumar: ಜನರ ಅಹವಾಲು ಆಲಿಸಲು ರಾಜ್ಯ ಸರ್ಕಾರದ ಹೊಸ ಪ್ಲಾನ್: ‘ಪ್ರಜಾ ಸೇವೆ’ ಇಲಾಖೆ ಸ್ಥಾಪನೆ, ಸಚಿವರಿಗೆ ಟಾಸ್ಕ್
ಬೆಂಗಳೂರು: ರಾಜ್ಯದ ನಾಗರಿಕರ ಕುಂದುಕೊರತೆಗಳನ್ನು ಅತ್ಯಂತ ವೇಗವಾಗಿ ಬಗೆಹರಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು (DK Shivakumar) ಹೊಸದಾಗಿ ‘ಪ್ರಜಾ ಸೇವೆ’ ಎಂಬ ಪ್ರತ್ಯೇಕ ಇಲಾಖೆಯನ್ನು ಅಸ್ತಿತ್ವಕ್ಕೆ ತರಲು ನಿರ್ಧರಿಸಿದೆ. ಈ ಹೊಸ ಇಲಾಖೆಯ ಉಸ್ತುವಾರಿಗಾಗಿಯೇ ಪ್ರತ್ಯೇಕ ಸಚಿವರೊಬ್ಬರನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸಚಿವರಾದ ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ ಮತ್ತು ಯು.ಟಿ. ಖಾದರ್ ಅವರ ಸಮ್ಮುಖದಲ್ಲಿ ಸಿಎಂ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು….
