TOP NEWS
Big Reward for Loyalty Late CMs Son Dr Ajay Singh Ends Long Wait Joins Karnataka Cabinet

Ajay Singh: ಧರ್ಮಸಿಂಗ್ ನಿವಾಸದಲ್ಲಿ ಭಾವುಕ ಕ್ಷಣ: ಮಗನಿಗೆ ಸಚಿವ ಸ್ಥಾನ ಸಿಗುತ್ತಿದ್ದಂತೆ ಕಣ್ಣೀರಿಟ್ಟ ತಾಯಿ ಪ್ರಭಾವತಿ!

ಬೆಂಗಳೂರು: ಕರ್ನಾಟಕದ ಹಿರಿಯ ರಾಜಕಾರಣಿ, ದಿವಂಗತ ಎನ್. ಧರ್ಮಸಿಂಗ್ ಅವರ ಬೆಂಗಳೂರಿನ ನಿವಾಸದಲ್ಲಿ ಇಂದು ಹಬ್ಬದ ವಾತಾವರಣದ ಜೊತೆಗೆ ಭಾವುಕ ಕ್ಷಣಗಳು ಎದುರಾಗಿವೆ. ಜೇವರ್ಗಿ ಕ್ಷೇತ್ರದ ಶಾಸಕರಾಗಿರುವ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ (Ajay Singh) ಅವರಿಗೆ ಕೊನೆಗೂ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿದ್ದು, ಈ ಸಂತಸದ ಸುದ್ದಿ ಕೇಳಿ ಅವರ ತಾಯಿ ಪ್ರಭಾವತಿ ಧರ್ಮಸಿಂಗ್ ಕಣ್ಣೀರು ಹಾಕಿದ್ದಾರೆ. ಮಗನನ್ನ ತಬ್ಬಿಕೊಂಡ ತಾಯಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ ಅಜಯ್ ಸಿಂಗ್…

Read More
Karnataka Mining Department Shaken Up 80% Staff Shunted as CM Approves Mega Transfer of 160 Officers

DK Shivakumar: ದಶಕಗಳ ಠಿಕಾಣಿಗೆ ಬ್ರೇಕ್: ಗಣಿ ಇಲಾಖೆಯ ಶೇ. 80ರಷ್ಟು ಸಿಬ್ಬಂದಿಗೆ ಎತ್ತಂಗಡಿ ಭಾಗ್ಯ, ಅಧಿಕಾರಿಗಳು ಶಾಕ್!

ಬೆಂಗಳೂರು: ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ದೀರ್ಘಕಾಲದಿಂದ ಮನೆಮಾಡಿದ್ದ ಏಕಸ್ವಾಮ್ಯಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಭಾರಿ ಆಡಳಿತಾತ್ಮಕ ಚಾಟಿ ಬೀಸಿದ್ದಾರೆ. ಒಂದೇ ಸ್ಥಳದಲ್ಲಿ ವರ್ಷಗಟ್ಟಲೆ ಠಿಕಾಣಿ ಹೂಡಿದ್ದ ಇಲಾಖೆಯ ಶೇಕಡಾ 80 ರಷ್ಟು ಸಿಬ್ಬಂದಿಯನ್ನು ಎತ್ತಂಗಡಿ ಮಾಡುವ ಮೂಲಕ ಸರ್ಕಾರ ಬೃಹತ್ ಸರ್ಜರಿ ನಡೆಸಿದೆ. ಇಲಾಖೆಯ ಇತಿಹಾಸದಲ್ಲೇ ಹಿಂದೆಂದೂ ಕಾಣದ ಮಾದರಿಯಲ್ಲಿ ಒಟ್ಟು 160 ಅಧಿಕಾರಿಗಳನ್ನು ಏಕಕಾಲಕ್ಕೆ ವರ್ಗಾವಣೆ ಮಾಡಲಾಗಿದ್ದು, ಇದರಲ್ಲಿ 131 ಭೂವಿಜ್ಞಾನಿಗಳು, 23 ಹಿರಿಯ ಭೂವಿಜ್ಞಾನಿಗಳು ಹಾಗೂ 6 ಉಪನಿರ್ದೇಶಕರು…

Read More
Big news Facial Recognition Smoke-Proof Cameras Karnataka New Rule to Protect Temple Donations

Big News: ಮುಜರಾಯಿ ದೇವಸ್ಥಾನಗಳ ಆಸ್ತಿ, ನಗದಿಗೆ ಹೈಟೆಕ್ ಭದ್ರತೆ: ರಾಜ್ಯ ಸರ್ಕಾರದಿಂದ ಕಟ್ಟುನಿಟ್ಟಿನ ನಿಯಮ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ಅಧೀನದಲ್ಲಿರುವ ಮುಜರಾಯಿ ದೇವಸ್ಥಾನಗಳ ಆಸ್ತಿಪಾಸ್ತಿ, ನಗದು ಹಾಗೂ ಅಮೂಲ್ಯ ಒಡವೆಗಳ ರಕ್ಷಣೆಗಾಗಿ ಕರ್ನಾಟಕ ಸರ್ಕಾರವು ಹೊಸದಾಗಿ ಕಟ್ಟುನಿಟ್ಟಿನ ಪ್ರಮಾಣಿತ ಕಾರ್ಯಾಚರಣೆ ವಿಧಾನವನ್ನು (SOP) ಜಾರಿಗೆ ತಂದಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಹುಂಡಿ ಕಳ್ಳತನ ಮತ್ತು ದೇಣಿಗೆ ದುರುಪಯೋಗ ಪ್ರಕರಣಗಳಿಗೆ ಬ್ರೇಕ್ ಹಾಕಲು ಕಂದಾಯ ಇಲಾಖೆಯ ಪ್ರಧಾನ (Big News) ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರು ಈ ಕಠಿಣ ಆದೇಶ ಹೊರಡಿಸಿದ್ದಾರೆ. ಈ ನೂತನ ಮಾರ್ಗಸೂಚಿಯ ಪ್ರಮುಖ ಅಂಶಗಳು ಈ ಕೆಳಗಿನಂತಿವೆ:…

Read More
Be aware that people are observing us DK Shivakumar tells party workers and leaders

DK Shivakumar: ಜನ ನಮ್ಮನ್ನು ಗಮನಿಸುತ್ತಿದ್ದಾರೆ ಎಂಬ ಎಚ್ಚರದಲ್ಲಿ ಕೆಲಸ ಮಾಡಿ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ನಾವು ಎರಡು ಕಣ್ಣಲ್ಲಿ ನೂರು ಜನರನ್ನು ನೋಡಿದರೆ, ನೂರು ಜನರ ಇನ್ನೂರು ಕಣ್ಣುಗಳು ನಮ್ಮನ್ನು ಗಮನಿಸುತ್ತಿರುತ್ತವೆ, ಹಾಗಾಗಿ ಎಚ್ಚರದಲ್ಲಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ಸಲಹೆ ನೀಡಿದ್ದಾರೆ. ಅಧಿಕಾರಿಗಳು ಮೈ ಮರೆಯಬಾರದು ಸುವರ್ಣಸೌಧದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಆರಂಭದಲ್ಲಿಯೇ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನ ಕೊಟ್ಟಿದ್ದು, ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನಾದೇಶಕ್ಕಾಗಿ ಜನರ ಬಳಿಕೆ…

Read More
Deadlock Over Indira Kit Government to Pause Free Ration Kit Scheme After 8 Months of Delay

Indira Kit: ಆರಂಭಕ್ಕೂ ಮುನ್ನವೇ ‘ಇಂದಿರಾ ಕಿಟ್’ ಯೋಜನೆಗೆ ಗ್ರಹಣ: ಟೆಂಡರ್ ಲಾಬಿ, ಕೋರ್ಟ್ ಭೀತಿಯಿಂದ ಬಡವರ ನಿರೀಕ್ಷೆ ಹುಸಿ!

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿಯ ಬದಲಾಗಿ ಬಡವರಿಗೆ ವಿತರಿಸಲು ರಾಜ್ಯ ಸರ್ಕಾರ ರೂಪಿಸಿದ್ದ ಮಹತ್ವಾಕಾಂಕ್ಷೆಯ ‘ಇಂದಿರಾ ಕಿಟ್’ (Indira Kit) ಯೋಜನೆ ಶುರುವಾಗುವ ಮುನ್ನವೇ ಮೂಲೆಗುಂಪಾಗುವ ಲಕ್ಷಣಗಳು ಗೋಚರಿಸುತ್ತಿವೆ. ಆಡಳಿತಾತ್ಮಕ ಹಾಗೂ ಕಾನೂನು ತೊಡಕುಗಳಿಂದಾಗಿ ಈ ಯೋಜನೆಯನ್ನು ಸಂಪೂರ್ಣವಾಗಿ ಕೈಬಿಡುವ ಚಿಂತನೆಯಲ್ಲಿ ಸರ್ಕಾರ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಏನಿದು ಇಂದಿರಾ ಕಿಟ್ ಯೋಜನೆ? ರಾಜ್ಯದ ಲಕ್ಷಾಂತರ ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಪೌಷ್ಟಿಕ ಆಹಾರ ಒದಗಿಸುವ ದೃಷ್ಟಿಯಿಂದ ಈ ಯೋಜನೆ ರೂಪಿಸಲಾಗಿತ್ತು….

Read More
Technical Issues and Public Backlash Slow Down GruhaJyothi Door to Door Survey

Gruhajyoti: ಗೃಹಜ್ಯೋತಿ ಗ್ರಾಹಕರ ಡೇಟಾ ಸಂಗ್ರಹಕ್ಕೆ ತಾಂತ್ರಿಕ ಗ್ರಹಣ: ಸೌಲಭ್ಯ ರದ್ದಾಗುವ ಆತಂಕದಲ್ಲಿ ಜನಸಾಮಾನ್ಯರು

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಜ್ಯೋತಿ’ (Gruhajyoti) ಯೋಜನೆಯ ಫಲಾನುಭವಿಗಳ ಮಾಹಿತಿ ಸಂಗ್ರಹದ ಜವಾಬ್ದಾರಿ ಹೊತ್ತಿರುವ ಎಸ್ಕಾಂಗಳ ಸಿಬ್ಬಂದಿಗೆ ಹಲವು ತಾಂತ್ರಿಕ ಅಡಚಣೆಗಳು ತಲೆನೋವಾಗಿ ಪರಿಣಮಿಸಿವೆ. ಸ್ಥಳೀಯವಾಗಿ ಸಮೀಕ್ಷೆ ನಡೆಸುವ ಸಂದರ್ಭದಲ್ಲಿ ಆ್ಯಪ್‌ಗಳ ಕೈಕೊಡುತ್ತಿರುವುದು ಹಾಗೂ ಸಾರ್ವಜನಿಕರ ಅಸಹಕಾರ ಸಿಬ್ಬಂದಿಯನ್ನು ಹೈರಾಣಾಗಿಸಿದೆ. ಸಿಬ್ಬಂದಿಯನ್ನು ಕಾಡುತ್ತಿರುವ ತಾಂತ್ರಿಕ ದೋಷಗಳು ಮೊಬೈಲ್ ಆ್ಯಪ್‌ನಲ್ಲಿ ಗ್ರಾಹಕರ ವಿದ್ಯುತ್ ಸಂಪರ್ಕದ ಆರ್‌ಆರ್ (RR) ಸಂಖ್ಯೆಯನ್ನು ನಮೂದಿಸಿದ ತಕ್ಷಣ, ಮಾಲೀಕರ ಹೆಸರು ಮತ್ತು ಯೋಜನೆಗೆ ನೋಂದಾಯಿತರಾದವರ ವಿವರಗಳು ಸ್ವಯಂಚಾಲಿತವಾಗಿ ಮೂಡಬೇಕಿದೆ. ಆದರೆ, ಹಲವು ಫಲಾನುಭವಿಗಳ…

Read More
Karnataka Extends Deadline for Submitting Residential OC and CC Until August 15

DK Shivakumar: ರಾಜ್ಯದ ವಸತಿ ಕಟ್ಟಡ ಮಾಲೀಕರಿಗೆ ಸರ್ಕಾರದಿಂದ ಬಿಗ್ ರಿಲೀಫ್: ಓಸಿ, ಸಿಸಿ ದಾಖಲೆ ಸಲ್ಲಿಕೆ ಅವಧಿ ಆಗಸ್ಟ್ 15 ರವರೆಗೆ ವಿಸ್ತರಣೆ!

ಬೆಂಗಳೂರು: ರಾಜ್ಯದ ಲಕ್ಷಾಂತರ ಮನೆ ಹಾಗೂ ಅಪಾರ್ಟ್‌ಮೆಂಟ್ ಮಾಲೀಕರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ, ಕಟ್ಟಡಗಳ ಆಕ್ಯುಪೆನ್ಸಿ ಸರ್ಟಿಫಿಕೇಟ್ (OC) ಮತ್ತು ಕಮೆನ್ಸ್‌ಮೆಂಟ್ ಸರ್ಟಿಫಿಕೇಟ್ (CC) ಒದಗಿಸಲು ನಿಗದಿಪಡಿಸಲಾಗಿದ್ದ ಗಡುವನ್ನು ಮುಂಬರುವ ಆಗಸ್ಟ್ 15 ರವರೆಗೆ ಮುಂದುವರಿಸಲು ನಿರ್ಧರಿಸಲಾಗಿದೆ. ಸಾರ್ವಜನಿಕರ ಒತ್ತಾಯಕ್ಕೆ ಮಣಿದ ಸರ್ಕಾರ ಕಟ್ಟಡಗಳ ಮಾಲೀಕತ್ವ ಹಾಗೂ ನಿರ್ಮಾಣ ಪೂರ್ಣಗೊಂಡಿರುವ ಅಧಿಕೃತ ದಾಖಲೆಗಳ (ಓಸಿ-ಸಿಸಿ)…

Read More