TOP NEWS
Minister Priyank Kharge Announces New Framework for Police Department Information Sharing

Priyank Kharge: ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಮಾರ್ಗಸೂಚಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಅಪರಾಧ ತನಿಖೆ ಹಾಗೂ ಸಾರ್ವಜನಿಕ ಸುರಕ್ಷತೆಗೆ ಸಂಬಂಧಿಸಿದ ಮಾಹಿತಿಯನ್ನು ಜವಾಬ್ದಾರಿಯುತವಾಗಿ ಮತ್ತು ಸಮನ್ವಯದೊಂದಿಗೆ ಸಾರ್ವಜನಿಕರಿಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ. ಹೊಸ ನಿಯಮಾವಳಿ ಜಾರಿಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಿಂದ ಹೊರಡಿಸಿರುವ ಹೊಸ ಮಾರ್ಗಸೂಚಿಗಳ ಮೂಲಕ, ಪೊಲೀಸ್ ಇಲಾಖೆಯ ವಿವಿಧ ಹಂತಗಳಲ್ಲಿ ಮಾಧ್ಯಮಗಳಿಗೆ ನೀಡಲಾಗುವ ಮಾಹಿತಿ, ಅಪರಾಧ ಪ್ರಕರಣಗಳ ತನಿಖಾ ವಿವರಗಳು ಹಾಗೂ ಸಾರ್ವಜನಿಕ ಪ್ರಕಟಣೆಗಳ…

Read More
Good news Karnataka government giving slipper with shoe and socks for students

Good News: ಸರ್ಕಾರಿ ಶಾಲಾ ಮಕ್ಕಳಿಗೆ ಶೂ-ಸಾಕ್ಸ್ ಜೊತೆ ‘ಚಪ್ಪಲಿ ಭಾಗ್ಯ’

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆಯು ಸಿಹಿ ಸುದ್ದಿಯೊಂದನ್ನು (Good News) ನೀಡಿದ್ದು, 2026-27ನೇ ಸಾಲಿನ ಶೈಕ್ಷಣಿಕ ವರ್ಷದ ‘ವಿದ್ಯಾ ವಿಕಾಸ’ ಯೋಜನೆಯಡಿ ಶೂ, ಸಾಕ್ಸ್ ಹಾಗೂ ಚಪ್ಪಲಿ ವಿತರಿಸಲು ಭರದ ಸಿದ್ಧತೆ ನಡೆಸಿದೆ. ಕಳೆದ ಎಂಟು ವರ್ಷಗಳಿಂದ ಜಾರಿಯಲ್ಲಿದ್ದ ಹಳೆಯ ನಿಯಮವನ್ನು ಬದಿಗೊತ್ತಿರುವ ಇಲಾಖೆ, ಈ ಬಾರಿ ಏಕರೂಪತೆ ಮತ್ತು ಗುಣಮಟ್ಟವನ್ನು ಕಾಪಾಡುವ ಉದ್ದೇಶದಿಂದ ಕೇಂದ್ರೀಕೃತ ಟೆಂಡರ್ ಪ್ರಕ್ರಿಯೆಯ ಮೂಲಕ ಖರೀದಿಗೆ ಮುಂದಾಗಿದೆ. ಈ ಹೊಸ ಪದ್ಧತಿಯಿಂದಾಗಿ ಸರ್ಕಾರದ ಬೊಕ್ಕಸಕ್ಕೆ ದೊಡ್ಡ…

Read More
Dk shivakumar statement about cabinet expansion

DK Shivakumar: ರಾಜ್ಯದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ: 20 ಸ್ಥಾನಗಳಿಗಾಗಿ 50ಕ್ಕೂ ಹೆಚ್ಚು ಶಾಸಕರ ಭಾರಿ ಪೈಪೋಟಿ!

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಸರತ್ತುಗಳು ಮತ್ತಷ್ಟು ವೇಗ ಪಡೆದುಕೊಂಡಿವೆ. ಇನ್ನೆರಡು ದಿನಗಳಲ್ಲಿ ಹೈಕಮಾಂಡ್‌ನಿಂದ ಇದಕ್ಕೆ ಹಸಿರು ನಿಶಾನೆ ಸಿಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಸ್ಪಷ್ಟಪಡಿಸಿದ್ದಾರೆ. ರಾಮನಗರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ರಾಹುಲ್ ಗಾಂಧಿ ಅವರು ವಿದೇಶ ಪ್ರವಾಸ ಮುಗಿಸಿ ಹಿಂತಿರುಗಿದ ತಕ್ಷಣವೇ ಸಂಪುಟ ವಿಸ್ತರಣೆಯ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ತಮಗೆ ಮುಖ್ಯಮಂತ್ರಿ ಸ್ಥಾನಕ್ಕಿಂತ 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ…

Read More
cm dk shivakumarwarning to excise department officers

DK Shivakumar: ಸರ್ಕಾರಕ್ಕೆ ಕೆಟ್ಟ ಹೆಸರು ತಂದರೆ ವರ್ಗಾವಣೆ ಕಡ್ಡಾಯ: ಅಬಕಾರಿ ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್!

ಬೆಂಗಳೂರು: “ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ವೃತ್ತಿಪರತೆಯನ್ನು ಪ್ರದರ್ಶಿಸುವ ಮೂಲಕ ಇಲಾಖೆ ಹಾಗೂ ಸರ್ಕಾರದ ಘನತೆಯನ್ನು ಎತ್ತಿಹಿಡಿಯಬೇಕು. ಒಂದು ವೇಳೆ ಸರ್ಕಾರದ ಗೌರವಕ್ಕೆ ಧಕ್ಕೆ ತರುವಂತಹ ಕೆಲಸ ಮಾಡಿದರೆ ಅದನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರಿಗಳಿಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶುಕ್ರವಾರ ನಡೆದ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇಲಾಖೆಯ…

Read More
Gruhalakshmi scheme women and welfare department gives clarification

Gruhalakshmi: ಅನರ್ಹರು, ಮೃತರ ಖಾತೆಗೆ ಹಣ ವರ್ಗಾವಣೆ ಆರೋಪಕ್ಕೆ ಬ್ರೇಕ್: ಗೃಹಲಕ್ಷ್ಮಿ ಯೋಜನೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಧಿಕೃತ ಸ್ಪಷ್ಟನೆ!

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ (Gruhalakshmi) ಯೋಜನೆಯಡಿ ಅನರ್ಹರು ಹಾಗೂ ಮರಣ ಹೊಂದಿದ ಫಲಾನುಭವಿಗಳ ಖಾತೆಗೆ ಹಣ ಪಾವತಿಯಾಗುತ್ತಿದೆ ಮತ್ತು ಸಿಎಜಿ ಲೆಕ್ಕ ತಪಾಸಣೆ ವರದಿಯಲ್ಲಿ ಆಕ್ಷೇಪಣೆಗಳು ವ್ಯಕ್ತವಾಗಿವೆ ಎಂಬ ವರದಿಗಳು ಭಾರಿ ಸದ್ದು ಮಾಡಿದ್ದವು. ಈ ಎಲ್ಲಾ ಗೊಂದಲಗಳು ಮತ್ತು ಆರೋಪಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸುದೀರ್ಘ ಹಾಗೂ ಸಮಗ್ರ ಸ್ಪಷ್ಟನೆಯನ್ನು ನೀಡಿದೆ. ಯೋಜನೆಯು ಸಂಪೂರ್ಣವಾಗಿ ನಿಯಮಾನುಸಾರ ಮತ್ತು ಪಾರದರ್ಶಕವಾಗಿ ಅನುಷ್ಠಾನಗೊಳ್ಳುತ್ತಿದ್ದು, ಯಾವುದೇ ಅಕ್ರಮಕ್ಕೆ ಇಲ್ಲಿ ಅವಕಾಶವಿಲ್ಲ…

Read More
Big news state government released district ministers list

Big News: ನೂತನ ಜಿಲ್ಲಾ ಉಸ್ತುವಾರಿ ಪಟ್ಟಿ ರಿಲೀಸ್‌ ಮಾಡಿದ ಸರ್ಕಾರ

ಬೆಂಗಳೂರು: ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಲುವಾಗಿ ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಮಾನ್ಯ ಸಚಿವರುಗಳಿಗೆ ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ (Big News) ಆದೇಶದವರೆಗೆ ಜಿಲ್ಲೆಗಳಿಗೆ ಪ್ರಕೃತಿ ವಿಕೋಪ ಮೇಲುಸ್ತುವಾರಿಗಾಗಿ ನೇಮಿಸಿ ಆದೇಶ ನೀಡಲಾಗಿದೆ. ಸಚಿವರ ಲಿಸ್ಟ್‌ ಹೀಗಿದೆ ಕ್ರ.ಸಂ ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಮಾನ್ಯ ಸಚಿವರುಗಳ ಹೆಸರು ಹಂಚಿಕೆ ಮಾಡಲಾದ ಜಿಲ್ಲೆಗಳು 1 ಡಾ. ಜಿ. ಪರಮೇಶ್ವರ ತುಮಕೂರು ಮತ್ತು ಚಿತ್ರದುರ್ಗ 2 ಶ್ರೀ ಕೆ.ಹೆಚ್. ಮುನಿಯಪ್ಪ ಬೆಂಗಳೂರು ಗ್ರಾಮಾಂತರ,…

Read More
DK Shivakumar Karnataka government starting new department called praja seve

DK Shivakumar: ಜನರ ಅಹವಾಲು ಆಲಿಸಲು ರಾಜ್ಯ ಸರ್ಕಾರದ ಹೊಸ ಪ್ಲಾನ್: ‘ಪ್ರಜಾ ಸೇವೆ’ ಇಲಾಖೆ ಸ್ಥಾಪನೆ, ಸಚಿವರಿಗೆ ಟಾಸ್ಕ್

ಬೆಂಗಳೂರು: ರಾಜ್ಯದ ನಾಗರಿಕರ ಕುಂದುಕೊರತೆಗಳನ್ನು ಅತ್ಯಂತ ವೇಗವಾಗಿ ಬಗೆಹರಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು (DK Shivakumar) ಹೊಸದಾಗಿ ‘ಪ್ರಜಾ ಸೇವೆ’ ಎಂಬ ಪ್ರತ್ಯೇಕ ಇಲಾಖೆಯನ್ನು ಅಸ್ತಿತ್ವಕ್ಕೆ ತರಲು ನಿರ್ಧರಿಸಿದೆ. ಈ ಹೊಸ ಇಲಾಖೆಯ ಉಸ್ತುವಾರಿಗಾಗಿಯೇ ಪ್ರತ್ಯೇಕ ಸಚಿವರೊಬ್ಬರನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸಚಿವರಾದ ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ ಮತ್ತು ಯು.ಟಿ. ಖಾದರ್ ಅವರ ಸಮ್ಮುಖದಲ್ಲಿ ಸಿಎಂ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು….

Read More