Keralam: ಕೇರಳದ ಮುಂದಿನ ಸಿಎಂ ಯಾರು? ಶಾಸಕರ ಬೆಂಬಲ ಗಳಿಸಿದ ಕೆ.ಸಿ. ವೇಣುಗೋಪಾಲ್; ಹೈಕಮಾಂಡ್ ಅಂಗಳದಲ್ಲಿ ಅಂತಿಮ ನಿರ್ಧಾರ
ತಿರುವನಂತಪುರಂ: ಕೇರಳ (Keralam) ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿರುವ ಯುಡಿಎಫ್ ಮೈತ್ರಿಕೂಟದಲ್ಲಿ ಈಗ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರುವಾಗಿದೆ. ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕರಲ್ಲಿ ಹೆಚ್ಚಿನವರು ಕೆ.ಸಿ. ವೇಣುಗೋಪಾಲ್ ಅವರ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವೇಣುಗೋಪಾಲ್ ಪರ ಒಲವು: ಕಾಂಗ್ರೆಸ್ ಹೈಕಮಾಂಡ್ ಕಳುಹಿಸಿದ್ದ ವೀಕ್ಷಕರಾದ ಅಜಯ್ ಮಾಕೆನ್ ಮತ್ತು ಮುಕುಲ್ ವಾಸ್ನಿಕ್ ಅವರು ಶಾಸಕರ ಅಭಿಪ್ರಾಯ ಪಡೆದು ದೆಹಲಿಗೆ ಮರಳಿದ್ದಾರೆ. ಮೂಲಗಳ ಪ್ರಕಾರ, ಕಾಂಗ್ರೆಸ್ನ ಒಟ್ಟು 63 ಶಾಸಕರಲ್ಲಿ ಸುಮಾರು 43…
