KH Muniyappa: ಅನ್ನಭಾಗ್ಯಕ್ಕೂ ಗ್ಯಾರಂಟಿ ಕತ್ತರಿ?; 14 ಲಕ್ಷ ನಕಲಿ ಬಿಪಿಎಲ್ ಕಾರ್ಡ್ ರದ್ದತಿಗೆ ಮುನಿಯಪ್ಪ ಮಾಸ್ಟರ್ ಪ್ಲಾನ್
ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ಯೋಜನೆಗಳಾದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿಯ ನಿಯಮಗಳನ್ನು ಕಠಿಣಗೊಳಿಸಿದ ಬೆನ್ನಲ್ಲೇ, ಈಗ ಉಚಿತ ಅಕ್ಕಿ ನೀಡುವ ‘ಅನ್ನಭಾಗ್ಯ’ ಯೋಜನೆಗೂ ಫಲಾನುಭವಿಗಳ ಸಂಖ್ಯೆ ಕಡಿತಗೊಳ್ಳುವ ಭೀತಿ ಎದುರಾಗಿದೆ. ಈ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ಅವರು ಇಲಾಖೆಯಲ್ಲಿ ಶೀಘ್ರದಲ್ಲೇ ಜಾರಿಗೆ ಬರಲಿರುವ ಭಾರಿ ಬದಲಾವಣೆಗಳ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಉಚಿತ ರೇಷನ್ ಸೌಲಭ್ಯವು ಕೇವಲ ನೈಜ…
