Muniyappa: ನಾಳೆಯಿಂದ ವಾಣಿಜ್ಯ ಅಡುಗೆ ಸಿಲಿಂಡರ್ ಸರಬರಾಜು: ಮುನಿಯಪ್ಪ
ಬೆಂಗಳೂರು: ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್ ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್ ಗಳನ್ನು ಸರಬರಾಜು ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ (Muniyappa) ಹೇಳಿದ್ದಾರೆ. ನಾಳೆಯಿಂದ ನಿರಂತರ ಸರಬರಾಜು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು, ಪ್ರಸಕ್ತ ರಾಜ್ಯದಲ್ಲಿ ಶೇಕಡ 20ರಷ್ಟು ಮಾತ್ರ ವಾಣಿಜ್ಯ ಅಡುಗೆ ಅನಿಲ ಸರಬರಾಜಾಗುತ್ತಿದೆ. ಆದರೆ, ಆಸ್ಪತ್ರೆಗಳಿಗೆ ಮಾತ್ರ ಶೇಕಡ 100ರಷ್ಟು ಗ್ಯಾಸ್ ಸಿಲಿಂಡರ್ ಗಳ ಸರಬರಾಜು ನಿರಂತರವಾಗಿ ನಡೆಯುತ್ತಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಪೆಟ್ರೋಲಿಯಂ ಸಚಿವ…
