Kodagu: ದುಬಾರೆ ತೂಗುಸೇತುವೆ ರಾಜಕೀಯ ಜಿದ್ದಾಜಿದ್ದಿ: ಸಚಿವ ಖಂಡ್ರೆಗೆ ಬಿಜೆಪಿ ಘೇರಾವ್, ಕಾಂಗ್ರೆಸ್ ತೀಕ್ಷ್ಣ ಪ್ರತಿಕ್ರಿಯೆ
ಕುಶಾಲನಗರ: ಕೊಡಗಿನ (Kodagu) ಪ್ರಸಿದ್ಧ ಪ್ರವಾಸಿ ಕೇಂದ್ರ ದುಬಾರೆಯಲ್ಲಿ ಬಹುನಿರೀಕ್ಷಿತ ತೂಗುಸೇತುವೆ ನಿರ್ಮಾಣದ ವಿಚಾರವು ಈಗ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿಯ ನಡುವಿನ ಕೆಸರೆರಚಾಟಕ್ಕೆ ಸಾಕ್ಷಿಯಾಗಿದೆ. ಬುಧವಾರ ಜಿಲ್ಲೆಗೆ ಭೇಟಿ ನೀಡಿದ್ದ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು, ರಾಜಕೀಯ ವಲಯದಲ್ಲಿ ಬಿಸಿ ಏರಿಸಿದೆ. ಸಚಿವರ ವಾಹನ ತಡೆದ ಬಿಜೆಪಿ ಕಾರ್ಯಕರ್ತರು: ದುಬಾರೆ ಆನೆ ಶಿಬಿರಕ್ಕೆ ಸಂಪರ್ಕ ಕಲ್ಪಿಸುವ 7.50 ಕೋಟಿ ರೂಪಾಯಿ ವೆಚ್ಚದ ತೂಗುಸೇತುವೆ…
