Crime: ಕೋಲಾರದಲ್ಲಿ ಕಲಬೆರಕೆ ಹಾಲು ಮಾರುವವರಿಗೆ ಎಚ್ಚರಿಕೆ ಕೊಟ್ಟ ಡಿಸಿ
ಕೋಲಾರ: ಕಲಬೆರಕೆ ಹಾಲು ಮತ್ತು ಅಸುರಕ್ಷಿತ ಕುಡಿಯುವ ನೀರು (Crime) ಮಾರಾಟ ಮಾಡುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಎಚ್ಚರಿಕೆ ನೀಡಿದ್ದಾರೆ. ಖಾಸಗಿ ಡೈರಿಗಳಲ್ಲಿ ಕಲಬೆರಕೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಿಲ್ಲೆಯಾದ್ಯಂತ ಸಂಗ್ರಹಿಸಲಾಗಿದ್ದ ಒಟ್ಟು 48 ಹಾಲಿನ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ಪೈಕಿ 18 ಮಾದರಿಗಳಲ್ಲಿ ಗುಣಮಟ್ಟದ ಕೊರತೆ ಇರುವುದು ದೃಢಪಟ್ಟಿದೆ. ವಿಶೇಷವಾಗಿ ಖಾಸಗಿ ಡೈರಿಗಳು ಲಾಭದ ಉದ್ದೇಶಕ್ಕಾಗಿ ಹಾಲಿನಲ್ಲಿ ಕೊಬ್ಬಿನ ಅಂಶವನ್ನು ಕಡಿಮೆ ಮಾಡಿ ಕಲಬೆರಕೆ ಮಾಡುತ್ತಿರುವುದು…
