Shocking: ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನಿಗೆ ಜೀವದಾನ ಮಾಡಿದ ಸಿಬ್ಬಂದಿ
ಮುರುಡೇಶ್ವರ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಮುರುಡೇಶ್ವರ ರೈಲ್ವೇ ನಿಲ್ದಾಣದಲ್ಲಿ ಭೀಕರ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಚಲಿಸುತ್ತಿದ್ದ ರೈಲಿನಿಂದ ಕೆಳಗಿಳಿಯಲು ಹೋಗಿ ಹಳಿಗಳ ಮಧ್ಯೆ ಸಿಲುಕಿಕೊಳ್ಳುತ್ತಿದ್ದ 22 ವರ್ಷದ ಯುವಕನೊಬ್ಬನನ್ನು ಕೊಂಕಣ (Shocking) ರೈಲ್ವೇಯ ಪಾಯಿಂಟ್ಸ್ಮನ್ ಗಣಪತಿ ನಾಯ್ಕ್ ಅವರು ತಕ್ಷಣ ಎಚ್ಚೆತ್ತುಕೊಂಡು ಬದುಕಿಸಿದ್ದಾರೆ. ಸದ್ಯ ಈ ರೋಮಾಂಚನಕಾರಿ ರಕ್ಷಣಾ ಕಾರ್ಯಾಚರಣೆಯ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರೈಲ್ವೇ ನೌಕರನ ಸಮಯಪ್ರಜ್ಞೆಗೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಏನಿದು ಘಟನೆ? ಕೇರಳದ ಕೊಚ್ಚುವೇಲಿಯಿಂದ ರಾಜಸ್ಥಾನದ…
