Koppal: ಅಂಜನಾದ್ರಿ ಬೆಟ್ಟದ ಹುಂಡಿ ಎಣಿಕೆಯಲ್ಲಿ ಪಾರದರ್ಶಕತೆ ಕೊರತೆ? 4 ದಿನ ತಡವಾಗಿ ಮಾಹಿತಿ ನೀಡಿದ ಅಧಿಕಾರಿಗಳು!
ಕೊಪ್ಪಳ: ಅಯೋಧ್ಯೆಯ ರಾಮಮಂದಿರದ ಹುಂಡಿ ಹಣದ ಎಣಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ವಿವಾದ ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಇತ್ತ ಹನುಮನ ಜನ್ಮಸ್ಥಳ ಎಂದೇ ಖ್ಯಾತಿಯಾಗಿರುವ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲೂ (Koppal) ಹುಂಡಿ ಎಣಿಕೆ ಪ್ರಕ್ರಿಯೆ ಭಕ್ತರಲ್ಲಿ ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ. ಹುಂಡಿ ಎಣಿಕೆ ಮುಗಿದು ನಾಲ್ಕು ದಿನಗಳವರೆಗೆ ಯಾವುದೇ ಮಾಹಿತಿ ನೀಡದ ತಾಲೂಕು ಆಡಳಿತದ ನಿಗೂಢ ನಡೆ ಸದ್ಯ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿ ಹಣದ…
