KSRTC: ಸಾರಿಗೆ ಸಮರ: ಮೇ 20 ರಿಂದ ರಾಜ್ಯಾದ್ಯಂತ ನೌಕರರ ಮುಷ್ಕರ
ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ (KSRTC) ನಡುವಿನ ವೇತನ ಜಟಾಪಟಿ ಈಗ ಮುಷ್ಕರದ ಹಂತಕ್ಕೆ ಬಂದು ತಲುಪಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮೇ 20ರಿಂದ ಕೆಲಸ ನಿಲ್ಲಿಸಿ ಪ್ರತಿಭಟನೆ ನಡೆಸಲು ಸಾರಿಗೆ ನೌಕರರ ಸಂಘಟನೆಗಳು ನಿರ್ಧರಿಸಿವೆ. ಇದರಿಂದಾಗಿ ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ. ಮಾತುಕತೆ ವಿಫಲ, ಮುಷ್ಕರ ಅನಿವಾರ್ಯ: ಸರ್ಕಾರದೊಂದಿಗೆ ನಡೆಸಿದ ಸಂಧಾನ ಸಭೆಗಳು ಯಶಸ್ವಿಯಾಗದ ಹಿನ್ನೆಲೆಯಲ್ಲಿ ನೌಕರರ ಜಂಟಿ ಕ್ರಿಯಾ…
