TOP NEWS
Big news Substandard Shoes and Socks for Government School Students Lokayukta Initiates Inquiry

Big News: ವಿದ್ಯಾವಿಕಾಸ ಯೋಜನೆಯಡಿ ಕಳಪೆ ಪಾದರಕ್ಷೆಗಳ ಪೂರೈಕೆ: ಉಪ ಲೋಕಾಯುಕ್ತರಿಂದ ಸ್ವಯಂಪ್ರೇರಿತ ತನಿಖೆ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ವಿತರಿಸಲಾಗುತ್ತಿರುವ ಶೂ ಹಾಗೂ ಸಾಕ್ಸ್‌ಗಳ ಗುಣಮಟ್ಟದ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಾಪಕ (Big News) ಆಕ್ರೋಶ ವ್ಯಕ್ತವಾಗಿತ್ತು. ಮಕ್ಕಳ ಕಾಲ್ನಡಿಗೆ ಹಾಗೂ ಅನುಕೂಲಕ್ಕಾಗಿ ಅತ್ಯಂತ ಮುತುವರ್ಜಿಯಿಂದ ಜಾರಿಗೆ ತಂದ ಈ ಯೋಜನೆಯಡಿ ಕಳಪೆ ಮಟ್ಟದ ಪಾದರಕ್ಷೆಗಳನ್ನು ಪೂರೈಕೆ ಮಾಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ವಿದ್ಯಮಾನವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಇದರ ಹಿಂದೆ ನಡೆದಿರಬಹುದಾದ ಅಕ್ರಮಗಳು ಹಾಗೂ…

Read More
Police Extortion Busted Lokayukta Arrests Constable Red Handed Over 20000 Bribe Demand

Lokayukta: ಕಲಬುರಗಿಯಲ್ಲಿ ಲೋಕಾಯುಕ್ತ ಭರ್ಜರಿ ಬೇಟೆ: ₹20 ಸಾವಿರ ಲಂಚ ಪಡೆಯುತ್ತಿದ್ದ ಕಾನ್‌ಸ್ಟೇಬಲ್ ರೆಡ್‌ಹ್ಯಾಂಡ್ ಲಾಕ್

ಕಲಬುರಗಿ: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ತವರ ಜಿಲ್ಲೆ (Lokayukta) ಕಲಬುರಗಿಯಲ್ಲಿ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಂಚ ಸ್ವೀಕರಿಸುತ್ತಿದ್ದ ಪೊಲೀಸ್ ಕಾನ್‌ಸ್ಟೇಬಲ್‌ ಒಬ್ಬರು ಬಲೆಗೆ ಬಿದ್ದಿದ್ದಾರೆ. 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಪೊಲೀಸ್ ಬ್ರಹ್ಮಪುರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಪರಶುರಾಮ್ ಎಂಬುವವರು ₹20,000 ಲಂಚದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಠಾಣೆಯ ಹಿಂಭಾಗದಲ್ಲೇ ಹಣ ಸ್ವೀಕರಿಸುತ್ತಿದ್ದಾಗ ಈ ದಾಳಿ ನಡೆದಿದೆ. ಇದೇ ಪ್ರಕರಣದಲ್ಲಿ…

Read More
Lokayukta Probe Sought Over Alleged 100 Crore Land Grab Involving Minister HC Balakrishna Wife

HC Balakrishna: ಸರ್ಕಾರಿ ಭೂಮಿ ಕಬಳಿಕೆ: ಸಚಿವರ ಪತ್ನಿ, ಕಾಂಗ್ರೆಸ್ ನಾಯಕರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸುತ್ತಮುತ್ತಲಿರುವ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಪ್ರಭಾವಿ ರಾಜಕಾರಣಿಗಳು ಮತ್ತು ಅಧಿಕಾರಿಗಳು ಸೇರಿ ಲೂಟಿ ಮಾಡಿರುವ ಬೃಹತ್ ಭೂ ಹಗರಣವೊಂದು (HC Balakrishna) ಬೆಳಕಿಗೆ ಬಂದಿದೆ. 2006ರ ಎ.ಟಿ. ರಾಮಸ್ವಾಮಿ ವರದಿ ಪ್ರಕಾರ ಸರ್ಕಾರಿ ಜಮೀನಿನ ಪೋಡಿ ಹಾಗೂ ಖಾತೆ ಮಾಡುವುದು ಸಂಪೂರ್ಣ ನಿಷಿದ್ಧವಾಗಿದ್ದರೂ, ನಿಯಮಗಳನ್ನು ಗಾಳಿಗೆ ತೂರಿ ಸುಮಾರು 300 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಭೂಮಿಯನ್ನು ಅಕ್ರಮವಾಗಿ ಖಾಸಗಿಯವರ ಹೆಸರಿಗೆ ವರ್ಗಾಯಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕುರುಬರಹಳ್ಳಿಯಲ್ಲಿ…

Read More
Kalburgi court denied bail to PSI and his co workers Corruption

Corruption: 20 ಸಾವಿರ ಕಿಕ್‌ಬ್ಯಾಕ್ ಪಡೆದು ಸಿಕ್ಕಿಬಿದ್ದಿದ್ದ ಯಡ್ರಾಮಿ ಪೊಲೀಸರಿಗೆ ಇಲ್ಲ ಬಿಡುಗಡೆ; ಜಾಮೀನು ತಳ್ಳಿಹಾಕಿದ ನ್ಯಾಯಾಲಯ

ಕಲಬುರಗಿ:ಯಡ್ರಾಮಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (PSI) ವಿಶ್ವನಾಥ ಮುದರೆಡ್ಡಿ ಹಾಗೂ ಅವರ ಇಲಾಖೆಯ ಸಿಬ್ಬಂದಿ ಸಿದ್ದಣ್ಣ ಬಿರಾದಾರ ಅವರ (Corruption) ಜೈಲು ಮುಕ್ತಿ ಸದ್ಯಕ್ಕಿಲ್ಲ. ಲಂಚದ ಹಣದೊಂದಿಗೆ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿದ್ದ ಈ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸ್ಥಳೀಯ ನ್ಯಾಯಾಲಯವು ವಜಾಗೊಳಿಸಿದೆ. ಇದರಿಂದಾಗಿ ಇಬ್ಬರೂ ಭ್ರಷ್ಟ ಸಿಬ್ಬಂದಿ ನ್ಯಾಯಾಂಗ ಬಂಧನದಲ್ಲೇ ಮುಂದುವರಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಸಿಬ್ಬಂದಿ ಕಳೆದ ಗುರುವಾರ ದೂರುದಾರರೊಬ್ಬರಿಂದ ಇಪ್ಪತ್ತು ಸಾವಿರ ರೂಪಾಯಿ ಲಂಚದ ಹಣವನ್ನು…

Read More
Lokayukta raid on bengaluru RTO office and haveri sand mining handle

Lokayukta: ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ: ಬೆಂಗಳೂರು ದಕ್ಷಿಣ ಆರ್‌ಟಿಒ ಅಧಿಕಾರಿಗಳಿಗೆ ಕ್ಲಾಸ್; ಹಾವೇರಿಯಲ್ಲಿ ಅಕ್ರಮ ಮರಳು ದಂಧೆಕೋರರು ಉಡೀಸ್!

ರಾಮನಗರ: ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಸಾರ್ವಜನಿಕರಿಂದ ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಪ್ರಾದೇಶಿಕ ಸಾರಿಗೆ (RTO) ಕಚೇರಿ ಮೇಲೆ ಲೋಕಾಯುಕ್ತ ಎಸ್ಪಿ ಪಿ.ವಿ.ಸ್ನೇಹಾ ಅವರ ನೇತೃತ್ವದಲ್ಲಿ ಮಿಂಚಿನ (Lokayukta) ದಾಳಿ ನಡೆದಿದೆ. ಕಚೇರಿಯ ಇಂಚಿಂಚೂ ಪರಿಶೀಲನೆ ನಡೆಸಿದ ಅಧಿಕಾರಿಗಳು, ಅಲ್ಲಿನ ಅವ್ಯವಸ್ಥೆ ಕಂಡು ಕಂಗಾಲಾಗಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಈ ಕಚೇರಿ ಮೇಲೆ ನಡೆದಿರುವ ಮೂರನೇ ದಾಳಿ…

Read More
lokayukta raid on 24 gram panchayat offices in dharwad

Lokayukta: ಧಾರವಾಡ ಜಿಲ್ಲೆಯ 24 ಗ್ರಾಮ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ಹಠಾತ್ ದಾಳಿ

ಧಾರವಾಡ: ಗ್ರಾಮೀಣ ಭಾಗದ ಪಂಚಾಯಿತಿ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಸಾಲು ಸಾಲು ಹಗರಣಗಳು ಹಾಗೂ ಸಾರ್ವಜನಿಕರ ಹಣ ಲೂಟಿ ಮಾಡುತ್ತಿದ್ದ ಅಧಿಕಾರಿಗಳ ಕಳ್ಳಾಟಕ್ಕೆ ಲೋಕಾಯುಕ್ತ (Lokayukta) ಪೊಲೀಸರು ಬ್ರೇಕ್ ಹಾಕಿದ್ದಾರೆ. ಜಿಲ್ಲೆಯ ಒಟ್ಟು 24 ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ಮೇಲೆ ಲೋಕಾಯುಕ್ತದ ಪ್ರತ್ಯೇಕ ತಂಡಗಳು ಏಕಕಾಲದಲ್ಲಿ ಸುಂಟರಗಾಳಿಯಂತೆ ಮುಗಿಬಿದ್ದಿದ್ದು, ನಕಲಿ ದಾಖಲೆ ಸೃಷ್ಟಿಸಿ ಹಣ ಎಗರಿಸುತ್ತಿದ್ದ ಸಿಬ್ಬಂದಿ ವರ್ಗ ದಿಕ್ಕೆಟ್ಟು ಕೂರುವಂತೆ ಮಾಡಿದೆ. ಹಠಾತ್ತಾಗಿ ನಡೆದ ಈ ಆಪರೇಷನ್‌ನಿಂದಾಗಿ ಇಡೀ ಧಾರವಾಡ ಜಿಲ್ಲೆಯ ಭ್ರಷ್ಟ ಆಡಳಿತ ಯಂತ್ರ ನಡುಗಿಹೋಗಿದೆ….

Read More