Melukote: ಮಾರ್ಚ್ 23 ರಿಂದ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯ: ಇದೇ 23 ರಿಂದ ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ (Melukote) ನಡೆಯಲಿರುವ ವಿಶ್ವ ವಿಖ್ಯಾತ ವೈರಮುಡಿ ಬ್ರಹ್ಮೋತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಸೂಕ್ತ ಕ್ರಮ ವಹಿಸಬೇಕೆಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದ್ದಾರೆ. ಶಾಸಕರಿಂದ ಪೂರ್ವಭಾವಿ ಸಭೆ ಮೇಲುಕೋಟೆ ಪ್ರವಾಸಿ ಮಂದಿರದಲ್ಲಿ ನಡೆದ ಮೇಲುಕೋಟೆಯ ಐತಿಹಾಸಿಕ ವೈರಮುಡಿ ಬ್ರಹ್ಮೋತ್ಸವದ ಪೂರ್ವಭಾವಿ ಸಿದ್ಧತೆಗಳ ಕುರಿತು ಮಾತನಾಡಿದ ಅವರು, ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಕಟ್ಟುನಿಟ್ಟಿನ ಭದ್ರತೆ, ಸುಗಮ ಜನಸಂದಣಿ ನಿರ್ವಹಣೆ ಮತ್ತು ಕುಡಿಯುವ ನೀರಿನ…
