BY Vijayendra: ‘ಇವರು ಹೆತ್ತ ತಾಯಿಗೆ ದ್ರೋಹ ಬಗೆದ ಮೀರ್ ಸಾಧಕರು!’: ಬಿ.ವೈ. ವಿಜಯೇಂದ್ರ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡಮತದಾನ ಮಾಡಿದ ಸ್ವಪಕ್ಷದ ಶಾಸಕರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಬೆನ್ನಿಗೆ ಚೂರಿ ಹಾಕಿದವರನ್ನು ‘ಮೀರ್ ಸಾಧಕರು’ ಎಂದು ಕರೆಯುವ ಮೂಲಕ ಪರೋಕ್ಷವಾಗಿ ಕಠಿಣ ಶಿಸ್ತು ಕ್ರಮ ಜರುಗಿಸುವ ಗ್ಯಾರಂಟಿ ಎಚ್ಚರಿಕೆಯನ್ನು ನೀಡಿದ್ದಾರೆ. ಹೆತ್ತ ತಾಯಿಗೆ ದ್ರೋಹ ಬಗೆದಂತೆ ನಡೆದುಕೊಂಡಿರುವ ಇಂತಹ ನಾಯಕರಿಗೆ ಯಾವುದೇ ಕಾರಣಕ್ಕೂ ಕ್ಷಮೆಯಿಲ್ಲ, ಇವರಿಗೆ ತಕ್ಕ ಪಾಠ ಕಲಿಸಲೇಬೇಕು ಎಂದು…
