TOP NEWS
Vande Mataram to get National Anthem Status

Vande Mataram: ಇನ್ನು ಮುಂದೆ ‘ವಂದೇ ಮಾತರಂ’ಗೂ ರಾಷ್ಟ್ರಗೀತೆಯಷ್ಟೇ ಗೌರವ: ಕೇಂದ್ರ ಸರ್ಕಾರದಿಂದ ಕಾನೂನು ತಿದ್ದುಪಡಿ

ನವದೆಹಲಿ: ಭಾರತದ ಸ್ವಾತಂತ್ರ್ಯ ಚಳವಳಿಯ ಪ್ರೇರಕ ಶಕ್ತಿಯಾಗಿದ್ದ ‘ವಂದೇ ಮಾತರಂ’ (Vande Mataram) ಗೀತೆಗೆ ಸಾಂವಿಧಾನಿಕವಾಗಿ ಅತ್ಯುನ್ನತ ಸ್ಥಾನಮಾನ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು, ಈ ಗೀತೆಯನ್ನು ರಾಷ್ಟ್ರಗೀತೆ ‘ಜನ ಗಣ ಮನ’ಕ್ಕೆ ಸಮಾನವಾಗಿ ಪರಿಗಣಿಸುವ ಪ್ರಸ್ತಾವನೆಗೆ ಅಸ್ತು ಎಂದಿದೆ. ಅವಮಾನಿಸಿದರೆ ಕಠಿಣ ಶಿಕ್ಷೆ: ಬಂಕಿಮಚಂದ್ರ ಚಟರ್ಜಿ ಅವರು ಈ ಗೀತೆಯನ್ನು ರಚಿಸಿ 150 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ….

Read More
shashi tharoor praises amit shah and modi

Shashi Tharoor: ಬಿಜೆಪಿಯ ಚುನಾವಣಾ ತಂತ್ರಗಾರಿಕೆಗೆ ಶಶಿ ತರೂರ್ ಮೆಚ್ಚುಗೆ: ಕಾಂಗ್ರೆಸ್‌ನಲ್ಲಿ ಆತ್ಮಾವಲೋಕನಕ್ಕೆ ಕರೆ!

ನವದೆಹಲಿ: ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ದಾಖಲಿಸಿರುವ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಕಾರ್ಯವೈಖರಿಯನ್ನು ಕಾಂಗ್ರೆಸ್ ಮುಖಂಡ ಶಶಿ ತರೂರ್ (Shashi Tharoor) ಶ್ಲಾಘಿಸಿದ್ದಾರೆ. ಎದುರಾಳಿ ಪಕ್ಷದ ಯಶಸ್ವಿ ಮ್ಯಾನೇಜ್‌ಮೆಂಟ್ ಕುರಿತು ಅವರು ನೀಡಿರುವ ಈ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ವೃತ್ತಿಪರ ಸಂಘಟನೆಗೆ ಸಂದ ಜಯ: ಬಿಜೆಪಿಯ ಚುನಾವಣಾ ನಿರ್ವಹಣೆಯ ಬಗ್ಗೆ ಮಾತನಾಡಿದ ತರೂರ್, “ನರೇಂದ್ರ ಮೋದಿ ಮತ್ತು ಅಮಿತ್…

Read More
Narendra Modi Bengal today is free from fear

Narendra Modi: ಬಂಗಾಳದಲ್ಲಿ ‘ಪರಿಬೋರ್ತನ್’: ಗಂಗೋತ್ರಿಯಿಂದ ಗಂಗಾಸಾಗರದವರೆಗೆ ಕಮಲ ಅರಳಿದೆ ಎಂದು ಗುಡುಗಿದ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿದ ಹಿನ್ನೆಲೆಯಲ್ಲಿ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ವಿಜಯೋತ್ಸವ ಆಚರಿಸಲಾಯಿತು. ಸಾಂಪ್ರದಾಯಿಕ ಬಂಗಾಳಿ ಶೈಲಿಯ ದೋತಿಯಲ್ಲಿ ಮಿಂಚಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ಬಂಗಾಳದ ನೆಲದಲ್ಲಿ ಅಕ್ಷರಶಃ ‘ಪರಿಬೋರ್ತನ್’ (ಬದಲಾವಣೆ) ಗಾಳಿ ಬೀಸಿದೆ ಎಂದು ಬಂಗಾಳಿ ಭಾಷೆಯಲ್ಲೇ ಘೋಷಿಸಿದರು. ಗಂಗೆಯ ಉಗಮ ಸ್ಥಾನವಾದ ಗಂಗೋತ್ರಿಯಿಂದ ಹಿಡಿದು ಅವಳು ಸಮುದ್ರ ಸೇರುವ ಬಂಗಾಳದ ಗಂಗಾಸಾಗರದವರೆಗೆ ಅಂದರೆ ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ ಮತ್ತು ಈಗ…

Read More
TVK win social media buzz about modi support to vijay

TVK: ಮೋದಿ ಹಾಕಿದ ‘ಮಾಸ್ಟರ್ ಪ್ಲಾನ್’ ದಳಪತಿ ವಿಜಯ್? ತಮಿಳುನಾಡಿನಲ್ಲಿ ದ್ರಾವಿಡ ಪಕ್ಷಗಳ ನಡುಕಕ್ಕೆ ಅಸಲಿ ಕಾರಣವೇನು?

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಡೀ ದೇಶದ ಗಮನ ಸೆಳೆದಿದೆ. ನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಅನಿರೀಕ್ಷಿತ ಮುನ್ನಡೆ ಸಾಧಿಸುವ ಮೂಲಕ ದಶಕಗಳಿಂದ ಆಳ್ವಿಕೆ ನಡೆಸಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳಿಗೆ ಶಾಕ್ ನೀಡಿದೆ. ಈ ಐತಿಹಾಸಿಕ ಮುನ್ನಡೆಯ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಒಂದು ರೋಚಕ ಚರ್ಚೆ ಶುರುವಾಗಿದೆ. ತಮಿಳುನಾಡಿನ ದ್ರಾವಿಡ ಭದ್ರಕೋಟೆಯನ್ನು ಭೇದಿಸಲು ಪ್ರಧಾನಿ ನರೇಂದ್ರ ಮೋದಿ ಅವರೇ ವಿಜಯ್ ಅವರನ್ನು ಗುಪ್ತವಾಗಿ ಕಣಕ್ಕಿಳಿಸಿದ್ದಾರೆಯೇ ಎಂಬ ಪ್ರಶ್ನೆ ಈಗ…

Read More
Narendra modi talks in parliament regarding women reservation

Narendra Modi: ಮೀಸಲಾತಿ ವಿರೋಧಿಸುವವರನ್ನ ದೇಶದ ಮಹಿಳೆಯರು ಕ್ಷಮಿಸಲ್ಲ: ನರೇಂದ್ರ ಮೋದಿ

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಬಹುನಿರೀಕ್ಷಿತ ಮಹಿಳಾ ಮೀಸಲಾತಿ ವಿಧೇಯಕದ ಪರವಾಗಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಈ ಐತಿಹಾಸಿಕ ನಡೆಯನ್ನು ವಿರೋಧಿಸುವವರನ್ನು ದೇಶದ ಮಹಿಳೆಯರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ. “ಈ ವಿಧೇಯಕವು ‘ವಿಕಸಿತ ಭಾರತ’ ನಿರ್ಮಾಣದ ಪಯಣದಲ್ಲಿ ಒಂದು ಹೊಸ ಅಧ್ಯಾಯ ಬರೆಯಲಿದೆ. ಈ ಮೂಲಕ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಮಂತ್ರವು ನಿಜವಾಗಲಿದೆ,” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. 30 ವರ್ಷಗಳ ಹಿಂದೆಯೇ ಆಗಬೇಕಿತ್ತು: “ಭಾರತವು ಪ್ರಜಾಪ್ರಭುತ್ವದ…

Read More
CM Siddaramaiah and Narendra modi special photo viral

CM Siddaramaiah: ಮೋದಿ ಜೊತೆ ಸಿದ್ದರಾಮಯ್ಯ ಸೀಕ್ರೇಟ್‌ ಟಾಕ್‌, ಫೋಟೋ ವೈರಲ್

ಮಂಡ್ಯ: ರಾಜ್ಯ ರಾಜಕಾರಣದ ಇಬ್ಬರು ಧ್ರುವಗಳಂತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಆಪ್ತ ಸಮಾಲೋಚನೆಯ ಫೋಟೋವೊಂದು ಈಗ ಎಲ್ಲೆಡೆ ಸದ್ದು ಮಾಡುತ್ತಿದೆ. ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ನಡೆದ ‘ಶ್ರೀಗುರು ಭೈರವೈಕ್ಯ ಮಂದಿರ’ ಲೋಕಾರ್ಪಣೆ ಕಾರ್ಯಕ್ರಮದ ವೇಳೆ ಈ ಅಪರೂಪದ ದೃಶ್ಯ ಕಂಡುಬಂದಿದೆ. ಕುತೂಹಲ ಮೂಡಿಸಿದ ಮೋದಿ ಮಾತು: ಕಾರ್ಯಕ್ರಮಕ್ಕಾಗಿ ಆಗಮಿಸಿದ ಪ್ರಧಾನಿ ಮೋದಿಯವರನ್ನು ಬರಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಪ್ರಧಾನಿಗಳು ಸಿಎಂ…

Read More
Narendra modi government raises fertilizer subsidy

Narendra Modi: ಮೋದಿ ಸರ್ಕಾರದಿಂದ ರೈತರಿಗೆ ಸಿಹಿಸುದ್ದಿ, ರಸಗೊಬ್ಬರ ಸಬ್ಸಿಡಿ ಹೆಚ್ಚಳ

ನವದೆಹಲಿ: ಖಾರಿಫ್ ಹಂಗಾಮಿನ ಕೃಷಿ ಕೆಲಸಗಳಲ್ಲಿ ತೊಡಗಿರುವ ದೇಶದ ರೈತರಿಗೆ ಕೇಂದ್ರ ಸರ್ಕಾರ ದೊಡ್ಡ ಸಮಾಧಾನದ ಸುದ್ದಿ ನೀಡಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕವಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗುವ ಭೀತಿ ಇತ್ತು. ಆದರೆ, ರೈತರ ಮೇಲೆ ಈ ಬೆಲೆ ಏರಿಕೆಯ ಹೊರೆ ಬೀಳದಂತೆ ತಡೆಯಲು ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸಚಿವ ಸಂಪುಟವು ಸಬ್ಸಿಡಿ ಮೊತ್ತವನ್ನು ಶೇ. 12ರಷ್ಟು ಹೆಚ್ಚಿಸಲು ಅನುಮೋದನೆ ನೀಡಿದೆ. ಬೆಲೆ ಹೆಚ್ಚಾದ್ರು ಚಿಂತೆ ಮಾಡಬೇಕಿಲ್ಲ ಈ ಮಹತ್ವದ…

Read More