Ram Mandir: ರಾಮ ಮಂದಿರ ದೇಣಿಗೆ ಹಗರಣಕ್ಕೆ ರಾಜಕೀಯ ಟ್ವಿಸ್ಟ್: ಪ್ರಧಾನಿ ಮೋದಿ ಮೌನಕ್ಕೆ ಕಾಂಗ್ರೆಸ್ ಕಿಡಿ
ನವದೆಹಲಿ: ಅಯೋಧ್ಯೆಯ ರಾಮ ಮಂದಿರದ (Ram Mandir) ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಭಾರಿ ಅವ್ಯವಹಾರ ಮತ್ತು ಹಣ ದುರುಪಯೋಗದ ವಿಚಾರವಾಗಿ ಕಾಂಗ್ರೆಸ್ ಪಕ್ಷವು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತನ್ನ ವಾಗ್ದಾಳಿಯನ್ನು ತೀವ್ರಗೊಳಿಸಿದೆ. ಈ ಹಗರಣದ ಕುರಿತು ಪ್ರಧಾನಿಯವರು ಮೌನ ವಹಿಸಿರುವುದು ದೇಶದ ಕೋಟ್ಯಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ಮಾಡಿದ ನೇರ ದ್ರೋಹ ಎಂದು ಕಾಂಗ್ರೆಸ್ ಆರೋಪಿಸಿದೆ. ಇದೇ ವೇಳೆ, ರಾಮ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲು ಯೋಜಿಸಿದ್ದ ಕಾಂಗ್ರೆಸ್ ನಿಯೋಗದ ನೇತೃತ್ವ…
