TOP NEWS
bjp leaders angry reaction about rahul gandhi statement

Rahul Gandhi: ಮೋದಿ ಸರ್ಕಾರ ಪತನ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಆಕ್ರೋಶ

ನವದೆಹಲಿ: ಮುಂಬರುವ ಒಂದು ವರ್ಷದ ಒಳಗಾಗಿ ಕೇಂದ್ರದ ಮೋದಿ ಸರ್ಕಾರ ಪತನಗೊಳ್ಳಲಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಹೇಳಿಕೆಯು ದೇಶದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ, ರಾಹುಲ್ ಗಾಂಧಿ ಅವರು ವಿದೇಶಿ ಶಕ್ತಿಗಳ ಕೈಗೊಂಬೆಯಾಗಿ ದೇಶದಲ್ಲಿ ಅರಾಜಕತೆ ಹಾಗೂ ಹಿಂಸಾಚಾರವನ್ನು ಪ್ರಚೋದಿಸುವ ಮೂಲಕ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಉರುಳಿಸಲು ದೊಡ್ಡ ಸಂಚು ರೂಪಿಸುತ್ತಿದ್ದಾರೆ ಎಂದು ಗಂಭೀರವಾಗಿ ಹರಿಹಾಯ್ದಿದೆ. ಕಾಂಗ್ರೆಸ್‌ನ ಅಲ್ಪಸಂಖ್ಯಾತರ ವಿಭಾಗದ…

Read More
rahul gandhi controversial statement about pm modi and amit shah bjp reply

Rahul Gandhi: ಪ್ರಧಾನಿ, ಗೃಹ ಸಚಿವರ ವಿರುದ್ಧ ರಾಹುಲ್ ಗಾಂಧಿ ವಿವಾದಾತ್ಮಕ ವಾಗ್ದಾಳಿ: ತಿರುಗೇಟು ನೀಡಿದ ಬಿಜೆಪಿ

ರಾಯ್‌ಬರೇಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ (Rahul Gandhi) ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಅತ್ಯಂತ ಕಠಿಣ ಪದಗಳ ಬಳಕೆಯೊಂದಿಗೆ ರಾಜಕೀಯ ವಲಯದಲ್ಲಿ ಹೊಸ ವಿವಾದವೊಂದನ್ನು ಹುಟ್ಟುಹಾಕಿದ್ದಾರೆ. ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದ ಉನ್ನತ ನಾಯಕರನ್ನು ನೇರವಾಗಿ ಗುರಿಯಾಗಿಸಿಕೊಂಡು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಂವಿಧಾನ ಮತ್ತು ದೇಶದ ಹಿತಾಸಕ್ತಿಗೆ ಧಕ್ಕೆ: ಸಭೆಯಲ್ಲಿ ಕೇಂದ್ರ ಸರ್ಕಾರದ ನೀತಿಗಳ…

Read More
Many states took steps towards Narendra modi suggestion

Narendra Modi: ತೈಲ ಬಿಕ್ಕಟ್ಟಿಗೆ ದೇಶಾದ್ಯಂತ ಮಿತವ್ಯಯದ ಬ್ರೇಕ್: ಕೇಂದ್ರ ಮತ್ತು ವಿವಿಧ ರಾಜ್ಯಗಳ ಮಹತ್ವದ ಕ್ರಮಗಳು

ನವದೆಹಲಿ: ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಜಾಗತಿಕ ತೈಲ ಬಿಕ್ಕಟ್ಟನ್ನು ಎದುರಿಸಲು ಮತ್ತು ವಿದೇಶಿ ವಿನಿಮಯ ಮೀಸಲನ್ನು ಕಾಯ್ದುಕೊಳ್ಳಲು ಕೇಂದ್ರ ಹಾಗೂ ದೇಶದ ವಿವಿಧ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಮಿತವ್ಯಯ ಕ್ರಮಗಳಿಗೆ ಮುಂದಾಗಿವೆ. ಪ್ರಧಾನಿ ಮೋದಿಯವರ (Narendra Modi) ಸಲಹೆಯ ಮೇರೆಗೆ ಆಡಳಿತ ವ್ಯವಸ್ಥೆಯಲ್ಲಿ ಇಂಧನ ವ್ಯಯವಾಗುವುದನ್ನು ತಡೆಯಲು ಭಾರಿ ಬದಲಾವಣೆಗಳನ್ನು ತರಲಾಗುತ್ತಿದೆ. ಮಾದರಿಯಾದ ಕೇಂದ್ರ ಸರ್ಕಾರ: ಮಿತವ್ಯಯದ ಹಾದಿಯಲ್ಲಿ ಕೇಂದ್ರ ಸರ್ಕಾರವೇ ಮೊದಲ ಹೆಜ್ಜೆ ಇಟ್ಟಿದ್ದು, ಪ್ರಧಾನಮಂತ್ರಿಯವರ ಅಧಿಕೃತ ಎಸ್‌ಪಿಜಿ (SPG) ಬೆಂಗಾವಲು ವಾಹನಗಳ ಸಂಖ್ಯೆಯನ್ನು ಶೇಕಡಾ…

Read More
Narendra Modi UAE visit signs agreements

Narendra Modi: ಇರಾನ್ ಯುದ್ಧದ ಮಧ್ಯೆ ಭಾರತ-ಯುಎಇ ರಕ್ಷಣಾ ಪಾಲುದಾರಿಕೆ: ತೈಲ ಬೆಲೆ ಏರಿಕೆಗೆ ಬ್ರೇಕ್ ಹಾಕಲು ಮೋದಿ ಮಾಸ್ಟರ್ ಪ್ಲಾನ್!

ನವದೆಹಲಿ/ದುಬೈ: ಪಶ್ಚಿಮ ಏಷ್ಯಾದಲ್ಲಿ ಇರಾನ್ ಯುದ್ಧದ ಕಾರ್ಮೋಡ ಕವಿದಿರುವ ಬೆನ್ನಲ್ಲೇ, ಭಾರತ ಮತ್ತು ಸಂಯುಕ್ತ (Narendra Modi) ಅರಬ್ ಎಮಿರೇಟ್ಸ್ (UAE) ನಡುವಿನ ರಕ್ಷಣಾ ಮತ್ತು ಇಂಧನ ಬಾಂಧವ್ಯ ಹೊಸ ಎತ್ತರಕ್ಕೆ ತಲುಪಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಯುಎಇ ಭೇಟಿಯ ಸಂದರ್ಭದಲ್ಲಿ ಉಭಯ ದೇಶಗಳು ವ್ಯೂಹಾತ್ಮಕ ರಕ್ಷಣಾ ಪಾಲುದಾರಿಕೆಯ ಚೌಕಟ್ಟಿಗೆ ಅಂಕಿತ ಹಾಕಿವೆ ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ. ಇದರೊಂದಿಗೆ ಭಾರತದ ಇಂಧನ ಭದ್ರತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಪೆಟ್ರೋಲಿಯಂ ಮೀಸಲು ಮತ್ತು ದ್ರವೀಕೃತ ಪೆಟ್ರೋಲಿಯಂ…

Read More
Delhi government announces mandatory work from home for its employs

Delhi: ಇಂಧನ ಮಿತವ್ಯಯಕ್ಕೆ ಮುಂದಾದ ದೆಹಲಿ ಸರ್ಕಾರ, ಸರ್ಕಾರಿ ನೌಕರರಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಆದೇಶ

ನವದೆಹಲಿ: ತೈಲ ಉಳಿತಾಯ ಮತ್ತು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ದೆಹಲಿ (Delhi) ಸರ್ಕಾರವು ತನ್ನ ಸಿಬ್ಬಂದಿಗೆ ವಾರದಲ್ಲಿ ಎರಡು ದಿನ ‘ಮನೆಯಿಂದಲೇ ಕೆಲಸ’ (Work From Home) ಮಾಡುವುದನ್ನು ಕಡ್ಡಾಯಗೊಳಿಸಿ ಆದೇಶಿಸಿದೆ. ಸಕಾರಿ ನೌಕರರಿಗೆ ಹೊಸ ನಿಯಮ ಹೆಚ್ಚುತ್ತಿರುವ ಇಂಧನ ಬಳಕೆಯನ್ನು ತಗ್ಗಿಸಲು ಮುಂದಾಗಿರುವ ದೆಹಲಿ ಸರ್ಕಾರ, ತನ್ನ ಎಲ್ಲಾ ಇಲಾಖೆಗಳ ಉದ್ಯೋಗಿಗಳು ವಾರಕ್ಕೆ ಎರಡು ದಿನ ಆಫೀಸ್‌ಗೆ ಬರುವ ಬದಲು ಮನೆಯಿಂದಲೇ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದೆ. ಈ ಕ್ರಮದಿಂದ ರಸ್ತೆಗಿಳಿಯುವ ವಾಹನಗಳ ಸಂಖ್ಯೆ ಕಡಿಮೆಯಾಗಲಿದ್ದು, ಇಂಧನ…

Read More
Maharashtra cm Devendra Fadnavis rides bike for fuel conservation

Devendra Fadnavis: ಬೈಕ್ ಏರಿ ಬಂದು ಬಜೆಟ್ ಉಳಿಸಿದ ಸಿಎಂ; ಮಹಾರಾಷ್ಟ್ರದಲ್ಲಿ ಜಾರಿಗೆ ಬಂತು ಹೈಟೆಕ್ ಮಿತವ್ಯಯ ಮಾರ್ಗಸೂಚಿ!

ಮುಂಬೈ: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಭೀತಿ ಹಾಗೂ ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಇಂಧನ ಉಳಿತಾಯ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ ಕರೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ಅತ್ಯಂತ ಸಕ್ರಿಯವಾಗಿ ಸ್ಪಂದಿಸಿದ್ದಾರೆ. ಗುರುವಾರ ಮುಂಬೈನ ತಮ್ಮ ಅಧಿಕೃತ ನಿವಾಸ ‘ವರ್ಷಾ’ದಿಂದ ವಿಧಾನ ಭವನಕ್ಕೆ ಸ್ವತಃ ಎಲೆಕ್ಟ್ರಿಕ್ ಮೋಟಾರ್ ಸೈಕಲ್ ಚಲಾಯಿಸಿಕೊಂಡು ಬರುವ ಮೂಲಕ ಅವರು ಮಿತವ್ಯಯದ ಸಂದೇಶ ಸಾರಿದ್ದಾರೆ.‌ ಬೆಂಗಾವಲು ಪಡೆ ಕಡಿತ ಮುಖ್ಯಮಂತ್ರಿಗಳ ಜೊತೆಗೆ ಸಚಿವ ಆಶಿಶ್ ಶೆಲಾರ್ ಅವರು…

Read More
r ashok cuts his Escort vehicle numbers

R Ashok: ಪ್ರಧಾನಿ ಮಾತಿಗೆ ಅಶೋಕ್‌ ಸಾಥ್‌, ಬೆಂಗಾವಲು ಪಡೆ ಕಡಿಮೆ ಮಾಡಿದ ನಾಯಕ

ಬೆಂಗಳೂರು: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಮಿತವ್ಯಯದ ಕರೆಗೆ ಸ್ಪಂದಿಸಿರುವ ರಾಜ್ಯ ಬಿಜೆಪಿ ನಾಯಕರು, ಇಂಧನ ಉಳಿತಾಯದತ್ತ ಹೆಜ್ಜೆ ಇಟ್ಟಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ಅವರು ತಮ್ಮ ಅಧಿಕೃತ ಬೆಂಗಾವಲು ಪಡೆಯ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ವಾಹನಗಳ ಬಳಕೆ ಕಡಿತ,…

Read More