TOP NEWS
Punished for Not Bringing Book 10 Year Old Girl lost life After Being Made to Stand in Sun at Delhi School

Crime: ಪುಸ್ತಕ ತಂದಿಲ್ಲವೆಂದು ಕ್ರೂರ ಶಿಕ್ಷೆ: ದೆಹಲಿಯಲ್ಲಿ ಸುಡುವ ಬಿಸಿಲಿಗೆ ನಿಂತು 10 ವರ್ಷದ ಬಾಲಕಿ ಸಾ*ವು!

ನವದೆಹಲಿ: ಶಾಲಾ ಶಿಕ್ಷಕರು ನೀಡಿದ ಕಠಿಣ ಶಿಕ್ಷೆಯೊಂದು ಹತ್ತರ ಹರೆಯದ ಪುಟ್ಟ ಬಾಲಕಿಯ ಪ್ರಾಣವನ್ನೇ ಬಲಿ ಪಡೆದಿರುವ ಅತ್ಯಂತ ಆಘಾತಕಾರಿ ಘಟನೆ ದೇಶದ ರಾಜಧಾನಿ ದೆಹಲಿಯಲ್ಲಿ (Crime) ನಡೆದಿದೆ. ತರಗತಿಗೆ ಪಠ್ಯಪುಸ್ತಕ ತರಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳನ್ನು ಸುಡುವ ಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷೆ ನೀಡಿದ್ದರಿಂದ, ಆಕೆ ತೀವ್ರ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಆಗಸ್ಟ್‌ 27 ರಂದು ನಡೆದಿದ್ದ ಘಟನೆ ಪೂರ್ವ ದೆಹಲಿಯ ವಿನೋದ್ ನಗರದಲ್ಲಿರುವ ಸರ್ವೋದಯ ಕನ್ಯಾ ವಿದ್ಯಾಲಯದಲ್ಲಿ ಈ ದಾರುಣ ಘಟನೆ ಸಂಭವಿಸಿದೆ….

Read More
Tragedy at IIT Delhi 31 Year Old MSc Student lost life by self harming on Campus

Shocking: ರಾಷ್ಟ್ರ ರಾಜಧಾನಿಯಲ್ಲಿ ಒಂದೇ ದಿನ ಇಬ್ಬರು ವಿದ್ಯಾರ್ಥಿಗಳ ದಾರುಣ ಸಾ*ವು

ನವದೆಹಲಿ: ದೇಶದ ರಾಜಧಾನಿಯಲ್ಲಿ ಶನಿವಾರ ವಿದ್ಯಾರ್ಥಿಗಳ ಆತ್ಮಹತ್ಯೆಯ ಎರಡು ಪ್ರತ್ಯೇಕ ಶೋಚನೀಯ ಘಟನೆಗಳು ವರದಿಯಾಗಿದ್ದು, ಶಿಕ್ಷಣ ಕ್ಷೇತ್ರವನ್ನು (Shocking) ಆಘಾತಕ್ಕೀಡುಮಾಡಿವೆ. ದೆಹಲಿಯ ಪ್ರತಿಷ್ಠಿತ ಐಐಟಿ (IIT) ಆವರಣದಲ್ಲಿ ಎಂ.ಎಸ್ಸಿ ಭೌತಶಾಸ್ತ್ರ ವ್ಯಾಸಂಗ ಮಾಡುತ್ತಿದ್ದ 31 ವರ್ಷದ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದರೆ, ಮತ್ತೊಂದೆಡೆ ಬಿ.ಎಸ್ಸಿ ನರ್ಸಿಂಗ್ ಓದುತ್ತಿದ್ದ 19 ವರ್ಷದ ಯುವತಿ ವಸತಿ ನಿಲಯದಲ್ಲಿ ನೇಣಿಗೆ ಶರಣಾಗಿದ್ದಾಳೆ. ಏನಿದು ಪ್ರಕರಣ? ಐಐಟಿ ದೆಹಲಿ ಆವರಣದಲ್ಲಿ ನಡೆದ ದುರಂತಕ್ಕೆ ಸಂಬಂಧಿಸಿದಂತೆ ಬೆಳಿಗ್ಗೆ ಸುಮಾರು 8:33ರ ಸುಮಾರಿಗೆ ಪೊಲೀಸರಿಗೆ…

Read More
CJP takes back protest delhi metro started working normally

CJP: ಧರಣಿ ವಾಪಸ್: ದೆಹಲಿ ಮೆಟ್ರೋ ಸೇವೆ ಸಂಪೂರ್ಣ ಯಥಾಸ್ಥಿತಿ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಕ್ರೋಚ್ ಜನತಾ ಪಾರ್ಟಿ (CJP) ಜಂತರ್ ಮಂತರ್‌ನಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆದಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಮೆಟ್ರೋ ರೈಲು ನಿಗಮವು (ಡಿಎಂಆರ್‌ಸಿ) ತನ್ನ ಜಾಲದ ಎಲ್ಲಾ ಮೆಟ್ರೋ ನಿಲ್ದಾಣಗಳ ಪ್ರವೇಶ ಹಾಗೂ ನಿರ್ಗಮನ ದ್ವಾರಗಳನ್ನು ಭಾನುವಾರದಿಂದ ಸಂಪೂರ್ಣವಾಗಿ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಿದೆ. ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ ಮೆಟ್ರೋ ಸಾರ್ವಜನಿಕರ ಅನುಕೂಲಕ್ಕಾಗಿ ಎಲ್ಲಾ ಮೆಟ್ರೋ ನಿಲ್ದಾಣಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಡಿಎಂಆರ್‌ಸಿ ತನ್ನ ಅಧಿಕೃತ ‘ಎಕ್ಸ್’ (ಟ್ವಿಟರ್)…

Read More
Tensions Flare at Delhi Protest as Woman Targets CJP Founder Abhijeet Dipke with Ink Attack

CJP: ಜಂತರ್ ಮಂತರ್‌ನಲ್ಲಿ ಹೈಡ್ರಾಮಾ: ಪ್ರತಿಭಟನೆ ವೇಳೆ ಸಿಜೆಪಿ ಮುಖ್ಯಸ್ಥ ಅಭಿಜೀತ್ ದಿಪ್ಕೆ ಮುಖಕ್ಕೆ ನೀಲಿ ಶಾಯಿ ಎರಚಿದ ಮಹಿಳೆ!

ನವದೆಹಲಿ: ರಾಜಧಾನಿ ದೆಹಲಿಯ ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಭಾನುವಾರ ತೀವ್ರ ಹೈಡ್ರಾಮಾ ನಡೆದಿದೆ. ಅಲ್ಲಿ ಧರಣಿ ಕುಳಿತಿದ್ದ ‘ಕಾಕ್‌ರೋಚ್ ಜನತಾ ಪಾರ್ಟಿ’ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರ ಮುಖಕ್ಕೆ ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ನೀಲಿ ಶಾಯಿ ಎರಚಿದ್ದಾರೆ. ಈ ಅನಿರೀಕ್ಷಿತ ಘಟನೆಯಿಂದಾಗಿ ಇಡೀ ಪ್ರತಿಭಟನಾ ಸ್ಥಳ ಕೆಲಕಾಲ ರಣರಂಗದಂತಾಗಿ, ಗೊಂದಲದ ಗೂಡಾಯಿತು. ಸದ್ಯ ಈ ಇಡೀ ದೃಶ್ಯಾವಳಿಗಳ ವಿಡಿಯೋ ಇಂಟರ್ನೆಟ್‌ನಲ್ಲಿ ಭಾರಿ ಸದ್ದು ಮಾಡುತ್ತಿದ್ದು, ದಿಪ್ಕೆ ಅಭಿಮಾನಿಗಳು ಹಾಗೂ ಸ್ಥಳದಲ್ಲಿದ್ದವರು ಮಹಿಳೆಯ ಕೃತ್ಯಕ್ಕೆ ತೀವ್ರ ಆಕ್ರೋಶ…

Read More
ISI Handlers Directing Delhi Terror Plot here is how

Shocking: ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು: ಪಾಕ್ ಐಎಸ್‌ಐ ಬೆಂಬಲಿತ ನಾಲ್ವರು ಶಂಕಿತ ಉಗ್ರರ ಬಂಧನ

ನವದೆಹಲಿ: ದೇಶದ ರಾಜಧಾನಿ ಹಾಗೂ ಸುತ್ತಮುತ್ತಲಿನ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಭಾರಿ ಪ್ರಮಾಣದ ಭಯೋತ್ಪಾದನಾ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ (Shocking) ಪಾಕಿಸ್ತಾನ ಬೆಂಬಲಿತ ನಾಲ್ವರು ಶಂಕಿತ ಉಗ್ರರನ್ನು ದೆಹಲಿ ಪೊಲೀಸರ ವಿಶೇಷ ದಳ (ಸ್ಪೆಷಲ್ ಸೆಲ್) ಯಶಸ್ವಿಯಾಗಿ ಬಂಧಿಸಿದೆ. ಈ ಮೂಲಕ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ISI) ನಂಟು ಹೊಂದಿದ್ದ ಅಂತರರಾಷ್ಟ್ರೀಯ ಮಟ್ಟದ ಕಾನೂನುಬಾಹಿರ ಶಸ್ತ್ರಾಸ್ತ್ರ ಜಾಲವನ್ನು ಪೊಲೀಸರು ಧ್ವಂಸಗೊಳಿಸಿದ್ದಾರೆ. ಬಂಧಿತ ಶಂಕಿತರು ಪಾಕ್ ಮೂಲದ ಹ್ಯಾಂಡ್ಲರ್ ಶಹಜಾದ್ ಭಟ್ಟಿ ಎಂಬಾತನ ನೇರ ಸೂಚನೆಯ ಮೇರೆಗೆ…

Read More
delhi government planning to avoid air pollution new trick

Air Pollution: ದೆಹಲಿಯಲ್ಲಿ ಚಳಿಗಾಲದ ಮಾಲಿನ್ಯಕ್ಕೆ ಮುಂಚಿತವಾಗಿಯೇ ಮಾಸ್ಟರ್ ಪ್ಲಾನ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪ್ರತಿವರ್ಷ ಚಳಿಗಾಲದಲ್ಲಿ ಸೃಷ್ಟಿಯಾಗುವ ಭೀಕರ ವಾಯುಮಾಲಿನ್ಯದ (Air Pollution) ಬಿಕ್ಕಟ್ಟನ್ನು ಮೊದಲೇ ನಿಯಂತ್ರಿಸಲು ದೆಹಲಿ ಸರ್ಕಾರವು ಭರ್ಜರಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದೆ. ಮುಂಬರುವ ದಿನಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಅಪಾಯಕಾರಿ ಮಟ್ಟಕ್ಕೆ ತಲುಪದಂತೆ ತಡೆಯಲು ಈ ಕಠಿಣ ನಿಯಮಾವಳಿಗಳನ್ನು ರೂಪಿಸಲಾಗಿದ್ದು, ಇವು ನವೆಂಬರ್ 1 ರಿಂದ ಫೆಬ್ರವರಿ 28 ರವರೆಗೆ ಕಡ್ಡಾಯವಾಗಿ ಜಾರಿಯಲ್ಲಿರಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. PUC ಇಲ್ಲದೇ ಇಂಧನ ಇಲ್ಲ ಈ ನೂತನ ನಿಯಮಗಳಿಂದಾಗಿ ವಾಹನ ಸವಾರರು ಜಾಗರೂಕರಾಗಿರಬೇಕಾಗುತ್ತದೆ….

Read More
Good News new Karnataka bhavan to construct in new delhi for UPSC and IAS students

Good News: ದೆಹಲಿಯಲ್ಲಿ ನಾಗರಿಕ ಸೇವೆಗಳ ಆಕಾಂಕ್ಷಿಗಳಿಗೆ ಹೊಸ ಆಸರೆ: ₹80 ಕೋಟಿ ವೆಚ್ಚದ ‘ಕರ್ನಾಟಕ ಭವನ-4’ ಕ್ಕೆ ಕ್ಯಾಬಿನೆಟ್ ಅಸ್ತು

ಬೆಂಗಳೂರು: ದೇಶದ ರಾಜಧಾನಿ ದೆಹಲಿಗೆ ತೆರಳಿ ಯುಪಿಎಸ್‌ಸಿ ಪರೀಕ್ಷೆಗಳಿಗೆ ತರಬೇತಿ ಪಡೆಯುವ ರಾಜ್ಯದ ಪ್ರತಿಭಾವಂತ ಯುವಜನತೆಗೆ ಸರ್ಕಾರ ಸಿಹಿ ಸುದ್ದಿ (Good News) ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯಲ್ಲಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನವದೆಹಲಿಯಲ್ಲಿ ಹೊಸದಾಗಿ ‘ಕರ್ನಾಟಕ ಭವನ-4’ ಕಟ್ಟಡವನ್ನು ನಿರ್ಮಿಸಲು ಹಸಿರು ನಿಶಾನೆ ನೀಡಲಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರದ ನಿರ್ಧಾರ ಐಎಎಸ್ ಮತ್ತು ಐಪಿಎಸ್‌ನಂತಹ ಉನ್ನತ ಹುದ್ದೆಗಳ ಕನಸು ಹೊತ್ತು ದೆಹಲಿಯಲ್ಲಿ ಬೀಡುಬಿಡುವ ಕರ್ನಾಟಕದ…

Read More