TOP NEWS
CJP takes back protest delhi metro started working normally

CJP: ಧರಣಿ ವಾಪಸ್: ದೆಹಲಿ ಮೆಟ್ರೋ ಸೇವೆ ಸಂಪೂರ್ಣ ಯಥಾಸ್ಥಿತಿ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಕ್ರೋಚ್ ಜನತಾ ಪಾರ್ಟಿ (CJP) ಜಂತರ್ ಮಂತರ್‌ನಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆದಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಮೆಟ್ರೋ ರೈಲು ನಿಗಮವು (ಡಿಎಂಆರ್‌ಸಿ) ತನ್ನ ಜಾಲದ ಎಲ್ಲಾ ಮೆಟ್ರೋ ನಿಲ್ದಾಣಗಳ ಪ್ರವೇಶ ಹಾಗೂ ನಿರ್ಗಮನ ದ್ವಾರಗಳನ್ನು ಭಾನುವಾರದಿಂದ ಸಂಪೂರ್ಣವಾಗಿ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಿದೆ. ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ ಮೆಟ್ರೋ ಸಾರ್ವಜನಿಕರ ಅನುಕೂಲಕ್ಕಾಗಿ ಎಲ್ಲಾ ಮೆಟ್ರೋ ನಿಲ್ದಾಣಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಡಿಎಂಆರ್‌ಸಿ ತನ್ನ ಅಧಿಕೃತ ‘ಎಕ್ಸ್’ (ಟ್ವಿಟರ್)…

Read More
Tensions Flare at Delhi Protest as Woman Targets CJP Founder Abhijeet Dipke with Ink Attack

CJP: ಜಂತರ್ ಮಂತರ್‌ನಲ್ಲಿ ಹೈಡ್ರಾಮಾ: ಪ್ರತಿಭಟನೆ ವೇಳೆ ಸಿಜೆಪಿ ಮುಖ್ಯಸ್ಥ ಅಭಿಜೀತ್ ದಿಪ್ಕೆ ಮುಖಕ್ಕೆ ನೀಲಿ ಶಾಯಿ ಎರಚಿದ ಮಹಿಳೆ!

ನವದೆಹಲಿ: ರಾಜಧಾನಿ ದೆಹಲಿಯ ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಭಾನುವಾರ ತೀವ್ರ ಹೈಡ್ರಾಮಾ ನಡೆದಿದೆ. ಅಲ್ಲಿ ಧರಣಿ ಕುಳಿತಿದ್ದ ‘ಕಾಕ್‌ರೋಚ್ ಜನತಾ ಪಾರ್ಟಿ’ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರ ಮುಖಕ್ಕೆ ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ನೀಲಿ ಶಾಯಿ ಎರಚಿದ್ದಾರೆ. ಈ ಅನಿರೀಕ್ಷಿತ ಘಟನೆಯಿಂದಾಗಿ ಇಡೀ ಪ್ರತಿಭಟನಾ ಸ್ಥಳ ಕೆಲಕಾಲ ರಣರಂಗದಂತಾಗಿ, ಗೊಂದಲದ ಗೂಡಾಯಿತು. ಸದ್ಯ ಈ ಇಡೀ ದೃಶ್ಯಾವಳಿಗಳ ವಿಡಿಯೋ ಇಂಟರ್ನೆಟ್‌ನಲ್ಲಿ ಭಾರಿ ಸದ್ದು ಮಾಡುತ್ತಿದ್ದು, ದಿಪ್ಕೆ ಅಭಿಮಾನಿಗಳು ಹಾಗೂ ಸ್ಥಳದಲ್ಲಿದ್ದವರು ಮಹಿಳೆಯ ಕೃತ್ಯಕ್ಕೆ ತೀವ್ರ ಆಕ್ರೋಶ…

Read More
ISI Handlers Directing Delhi Terror Plot here is how

Shocking: ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು: ಪಾಕ್ ಐಎಸ್‌ಐ ಬೆಂಬಲಿತ ನಾಲ್ವರು ಶಂಕಿತ ಉಗ್ರರ ಬಂಧನ

ನವದೆಹಲಿ: ದೇಶದ ರಾಜಧಾನಿ ಹಾಗೂ ಸುತ್ತಮುತ್ತಲಿನ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಭಾರಿ ಪ್ರಮಾಣದ ಭಯೋತ್ಪಾದನಾ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ (Shocking) ಪಾಕಿಸ್ತಾನ ಬೆಂಬಲಿತ ನಾಲ್ವರು ಶಂಕಿತ ಉಗ್ರರನ್ನು ದೆಹಲಿ ಪೊಲೀಸರ ವಿಶೇಷ ದಳ (ಸ್ಪೆಷಲ್ ಸೆಲ್) ಯಶಸ್ವಿಯಾಗಿ ಬಂಧಿಸಿದೆ. ಈ ಮೂಲಕ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ISI) ನಂಟು ಹೊಂದಿದ್ದ ಅಂತರರಾಷ್ಟ್ರೀಯ ಮಟ್ಟದ ಕಾನೂನುಬಾಹಿರ ಶಸ್ತ್ರಾಸ್ತ್ರ ಜಾಲವನ್ನು ಪೊಲೀಸರು ಧ್ವಂಸಗೊಳಿಸಿದ್ದಾರೆ. ಬಂಧಿತ ಶಂಕಿತರು ಪಾಕ್ ಮೂಲದ ಹ್ಯಾಂಡ್ಲರ್ ಶಹಜಾದ್ ಭಟ್ಟಿ ಎಂಬಾತನ ನೇರ ಸೂಚನೆಯ ಮೇರೆಗೆ…

Read More
delhi government planning to avoid air pollution new trick

Air Pollution: ದೆಹಲಿಯಲ್ಲಿ ಚಳಿಗಾಲದ ಮಾಲಿನ್ಯಕ್ಕೆ ಮುಂಚಿತವಾಗಿಯೇ ಮಾಸ್ಟರ್ ಪ್ಲಾನ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪ್ರತಿವರ್ಷ ಚಳಿಗಾಲದಲ್ಲಿ ಸೃಷ್ಟಿಯಾಗುವ ಭೀಕರ ವಾಯುಮಾಲಿನ್ಯದ (Air Pollution) ಬಿಕ್ಕಟ್ಟನ್ನು ಮೊದಲೇ ನಿಯಂತ್ರಿಸಲು ದೆಹಲಿ ಸರ್ಕಾರವು ಭರ್ಜರಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದೆ. ಮುಂಬರುವ ದಿನಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಅಪಾಯಕಾರಿ ಮಟ್ಟಕ್ಕೆ ತಲುಪದಂತೆ ತಡೆಯಲು ಈ ಕಠಿಣ ನಿಯಮಾವಳಿಗಳನ್ನು ರೂಪಿಸಲಾಗಿದ್ದು, ಇವು ನವೆಂಬರ್ 1 ರಿಂದ ಫೆಬ್ರವರಿ 28 ರವರೆಗೆ ಕಡ್ಡಾಯವಾಗಿ ಜಾರಿಯಲ್ಲಿರಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. PUC ಇಲ್ಲದೇ ಇಂಧನ ಇಲ್ಲ ಈ ನೂತನ ನಿಯಮಗಳಿಂದಾಗಿ ವಾಹನ ಸವಾರರು ಜಾಗರೂಕರಾಗಿರಬೇಕಾಗುತ್ತದೆ….

Read More
Good News new Karnataka bhavan to construct in new delhi for UPSC and IAS students

Good News: ದೆಹಲಿಯಲ್ಲಿ ನಾಗರಿಕ ಸೇವೆಗಳ ಆಕಾಂಕ್ಷಿಗಳಿಗೆ ಹೊಸ ಆಸರೆ: ₹80 ಕೋಟಿ ವೆಚ್ಚದ ‘ಕರ್ನಾಟಕ ಭವನ-4’ ಕ್ಕೆ ಕ್ಯಾಬಿನೆಟ್ ಅಸ್ತು

ಬೆಂಗಳೂರು: ದೇಶದ ರಾಜಧಾನಿ ದೆಹಲಿಗೆ ತೆರಳಿ ಯುಪಿಎಸ್‌ಸಿ ಪರೀಕ್ಷೆಗಳಿಗೆ ತರಬೇತಿ ಪಡೆಯುವ ರಾಜ್ಯದ ಪ್ರತಿಭಾವಂತ ಯುವಜನತೆಗೆ ಸರ್ಕಾರ ಸಿಹಿ ಸುದ್ದಿ (Good News) ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯಲ್ಲಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನವದೆಹಲಿಯಲ್ಲಿ ಹೊಸದಾಗಿ ‘ಕರ್ನಾಟಕ ಭವನ-4’ ಕಟ್ಟಡವನ್ನು ನಿರ್ಮಿಸಲು ಹಸಿರು ನಿಶಾನೆ ನೀಡಲಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರದ ನಿರ್ಧಾರ ಐಎಎಸ್ ಮತ್ತು ಐಪಿಎಸ್‌ನಂತಹ ಉನ್ನತ ಹುದ್ದೆಗಳ ಕನಸು ಹೊತ್ತು ದೆಹಲಿಯಲ್ಲಿ ಬೀಡುಬಿಡುವ ಕರ್ನಾಟಕದ…

Read More
Narendra Modi inaugurated developmental work in delhi

Narendra Modi: ದೆಹಲಿಯ 33 ಸಾವಿರದ 500 ಕೋಟಿ ರೂಪಾಯಿ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಮಾಡಿದ ಮೋದಿ

ನವದೆಹಲಿ: ದೆಹಲಿಯ ಮೂಲಸೌಕರ್ಯ ಮತ್ತು ಸಾರಿಗೆ ವ್ಯವಸ್ಥೆಗಳ ಸುಧಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿನ್ನೆ ಸುಮಾರು 33 ಸಾವಿರದ 500 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು.  ನೂತನ ಕಾರಿಡಾರ್ ಉದ್ಘಾಟನೆ ಈ ವೇಳೆ ಕೇಂದ್ರ ಸಚಿವ ಮನೋಹರ್ ಲಾಲ್, ದೆಹಲಿ ಮುಖ್ಯಮಂತ್ರಿ ರೇಖಾಗುಪ್ತಾ, ಸಚಿವರಾದ ತೋಕನ್ ಸಾಹು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.  ಈ ಸಂದರ್ಭದಲ್ಲಿ ಪ್ರಧಾನಿ 18 ಸಾವಿರದ 300 ಕೋಟಿ ರೂಪಾಯಿ ಮೌಲ್ಯದ…

Read More