DK Shivakumar: ಒಂದು ದೇಶ, ಒಂದು ಚುನಾವಣೆ ಒಕ್ಕೂಟ ವ್ಯವಸ್ಥೆಗೆ ಮಾರಕ: ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ!
ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಒಂದು ದೇಶ, ಒಂದು ಚುನಾವಣೆ’ (ಒನ್ ನೇಷನ್, ಒನ್ ಎಲೆಕ್ಷನ್) ನೀತಿಯನ್ನು ಕರ್ನಾಟಕ ಸರ್ಕಾರ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತೀವ್ರವಾಗಿ ವಿರೋಧಿಸಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಜಂಟಿ ಸಂಸದೀಯ ಅಧ್ಯಯನ ಸಮಿತಿ ನಡೆಸಿದ ವಿಶೇಷ ಸಂವಾದ ಸಭೆಯಲ್ಲಿ ಪಾಲ್ಗೊಂಡು ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಕೇಂದ್ರದ ವಿರುದ್ಧ ಡಿಕೆಶಿ ಆರೋಪ ದೇಶದ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ತತ್ವದ…
