Pradeep Eshwar: ಚಿಕ್ಕಬಳ್ಳಾಪುರ ಕೆಂಪೇಗೌಡ ಜಯಂತಿ ಗಲಾಟೆ ಮುನ್ನಲೆಗೆ: ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್ ಈಶ್ವರ್ ಕಣ್ಣೀರು
ಬೆಂಗಳೂರು: ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ನಡೆದ ಗಲಾಟೆಯ ಸರಣಿ ಬೆಳವಣಿಗೆಗಳು ಈಗ ರಾಜಕೀಯವಾಗಿ ಭಾರಿ ಚರ್ಚೆಗೆ ಗ್ರಾಸವಾಗಿವೆ. ಘಟನೆಗೆ ಸಂಬಂಧಿಸಿದಂತೆ ಒಂದು ಕಡೆ ಆಡಳಿತ ಪಕ್ಷದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಕಣ್ಣೀರು ಹಾಕಿದ್ದರೆ, ಮತ್ತೊಂದೆಡೆ ವಿರೋಧ ಪಕ್ಷಗಳು ಶಾಸಕರ ವಿರುದ್ಧವೇ ಪೊಲೀಸ್ ಮೆಟ್ಟಿಲೇರಿವೆ. ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ನಡೆದ ಈ ಹೈಡ್ರಾಮಾದ ಸಂಪೂರ್ಣ ವಿವರ ಇಲ್ಲಿದೆ. ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್ ಕಾರ್ಯಕ್ರಮದಲ್ಲಿ ನಡೆದ ಭಾರಿ ಗದ್ದಲದ ಹಿನ್ನೆಲೆಯಲ್ಲಿ…
