K Sudhakar: ಚಿಕ್ಕಬಳ್ಳಾಪುರದಲ್ಲಿ ಚಪ್ಪಲಿ ರಾಜಕೀಯದ ಕಿಡಿ: ಕಾರ್ಯಕರ್ತರ ಕೇಸ್ಗೆ ಸುಧಾಕರ್ ಸಾಥ್
ಚಿಕ್ಕಬಳ್ಳಾಪುರ: ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ಕಡೆಗೆ ಚಪ್ಪಲಿ ತೂರಲು ಯತ್ನಿಸಿದ ಪ್ರಕರಣ ಜಿಲ್ಲೆಯಲ್ಲಿ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಖಂಡಿಸಿದ್ದರೆ, ಇತ್ತ ಸಂಸದ ಡಾ. ಕೆ. ಸುಧಾಕರ್ (K Sudhakar) ಅವರು ಈ ಜಗಳದ ಹಿನ್ನೆಲೆಯಲ್ಲಿ ಪೊಲೀಸರಿಂದ ಕಾನೂನು ಕ್ರಮ ಎದುರಿಸುತ್ತಿರುವ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಬೆಂಬಲಕ್ಕೆ ಧಾವಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮೈತ್ರಿ ಪಕ್ಷಗಳ ಕಾರ್ಯಕರ್ತರ…
