RSS: ಆರ್ಎಸ್ಎಸ್ ನಾಯಕರ ಮುಖವಾಡ ಧರಿಸಿ ಚಡ್ಡಿ ಒದ್ದೆ ಮಾಡಿಕೊಂಡಂತೆ ನಾಟಕ: ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಎನ್ಎಸ್ಯುಐ ಅಣುಕು ಪ್ರತಿಭಟನೆಯ ಹೈಡ್ರಾಮಾ!
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನೋಂದಣಿ ಮತ್ತು ಆರ್ಥಿಕ ಮೂಲಗಳ ಪಾರದರ್ಶಕತೆಗೆ ಆಗ್ರಹಿಸಿ ಕರ್ನಾಟಕ ರಾಜಕಾರಣದಲ್ಲಿ ಸೃಷ್ಟಿಯಾಗಿರುವ ಕಿಚ್ಚು ಈಗ ಬೀದಿ ಹೋರಾಟದ ರೂಪ ಪಡೆದಿದೆ. ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಸರಣಿ ಸವಾಲುಗಳಿಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ವಿದ್ಯಾರ್ಥಿ ಘಟಕವಾದ ಎನ್ಎಸ್ಯುಐ (NSUI) ಕಾರ್ಯಕರ್ತರು, ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಹಮ್ಮಿಕೊಂಡಿದ್ದ ವಿನೂತನ ಬೀದಿ ನಾಟಕ ಹಾಗೂ ಅಣುಕು ಪ್ರತಿಭಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರತಿಭಟನೆಯ ಭಾಗವಾಗಿ…
