Priyank Kharge: ಆರ್ಎಸ್ಎಸ್ ಪ್ರಶ್ನಿಸಿದರೆ ಬಿಜೆಪಿ ಬುಸುಗುಡುತ್ತೆ: ಸೋಷಿಯಲ್ ಮೀಡಿಯಾದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೊಸ ವಾಗ್ದಾಳಿ!
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನೋಂದಣಿ ಪ್ರಕ್ರಿಯೆ ಹಾಗೂ ಅದರ ಆದಾಯದ ಮೂಲಗಳ ಕುರಿತಾಗಿ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬಿಜೆಪಿ ನಾಯಕರ ನಡುವೆ ಆರಂಭವಾಗಿರುವ ರಾಜಕೀಯ ಜಟಾಪಟಿ ಮತ್ತಷ್ಟು ತಾರಕಕ್ಕೇರಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ, (Priyank Kharge) ಆರ್ಎಸ್ಎಸ್ ಮತ್ತು ಬಿಜೆಪಿ ವಿರುದ್ಧ ಮತ್ತೊಮ್ಮೆ ತೀಕ್ಷ್ಣ ಪದಗಳ ಮೂಲಕ ವಾಗ್ದಾಳಿ ನಡೆಸಿದ್ದಾರೆ. “ಆರ್ಎಸ್ಎಸ್ ಸಂಸ್ಥೆ ಗಲಿಬಿಲಿಗೊಂಡಾಗಲೆಲ್ಲಾ…
