Corruption: 20 ಸಾವಿರ ಕಿಕ್ಬ್ಯಾಕ್ ಪಡೆದು ಸಿಕ್ಕಿಬಿದ್ದಿದ್ದ ಯಡ್ರಾಮಿ ಪೊಲೀಸರಿಗೆ ಇಲ್ಲ ಬಿಡುಗಡೆ; ಜಾಮೀನು ತಳ್ಳಿಹಾಕಿದ ನ್ಯಾಯಾಲಯ
ಕಲಬುರಗಿ:ಯಡ್ರಾಮಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ (PSI) ವಿಶ್ವನಾಥ ಮುದರೆಡ್ಡಿ ಹಾಗೂ ಅವರ ಇಲಾಖೆಯ ಸಿಬ್ಬಂದಿ ಸಿದ್ದಣ್ಣ ಬಿರಾದಾರ ಅವರ (Corruption) ಜೈಲು ಮುಕ್ತಿ ಸದ್ಯಕ್ಕಿಲ್ಲ. ಲಂಚದ ಹಣದೊಂದಿಗೆ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿದ್ದ ಈ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸ್ಥಳೀಯ ನ್ಯಾಯಾಲಯವು ವಜಾಗೊಳಿಸಿದೆ. ಇದರಿಂದಾಗಿ ಇಬ್ಬರೂ ಭ್ರಷ್ಟ ಸಿಬ್ಬಂದಿ ನ್ಯಾಯಾಂಗ ಬಂಧನದಲ್ಲೇ ಮುಂದುವರಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಸಿಬ್ಬಂದಿ ಕಳೆದ ಗುರುವಾರ ದೂರುದಾರರೊಬ್ಬರಿಂದ ಇಪ್ಪತ್ತು ಸಾವಿರ ರೂಪಾಯಿ ಲಂಚದ ಹಣವನ್ನು…
