High Court: ಅಪ್ಪು ಅಗಲಿಕೆ ವೇಳೆ ನಿಂದನಾತ್ಮಕ ಪೋಸ್ಟ್: ಹೈಕೋರ್ಟ್ನಿಂದ ಯುವಕನಿಗೆ ತೀವ್ರ ತರಾಟೆ
ಬೆಂಗಳೂರು: ಕರ್ನಾಟಕದ ಮನೆಮಾತಾಗಿದ್ದ ದಿವಂಗತ ನಟ ಪುನೀತ್ ರಾಜ್ಕುಮಾರ್ ಅವರ ಅಕಾಲಿಕ ಅಗಲಿಕೆಯ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ನಲ್ಲಿ ತೀರ ಆಕ್ಷೇಪಾರ್ಹ ಹಾಗೂ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿದ್ದ ಬೆಂಗಳೂರಿನ ಯುವಕ ರಿತ್ವಿಕ್ ಶರ್ಮಾನಿಗೆ ಕರ್ನಾಟಕ ಹೈಕೋರ್ಟ್ (High Court) ಕಟು ಪದಗಳಿಂದ ತೀವ್ರ ತರಾಟೆಗೆ ತೆಗೆದುಕೊಂಡಿದೆ. ತನ್ನ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಅರ್ಜಿದಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, ಯುವಕನ ಈ ಅನಾಗರಿಕ ನಡವಳಿಕೆಗೆ ತೀವ್ರ…
