TOP NEWS
R ashok slams government over shivajnagar incident

R Ashok: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಆರ್‌ ಅಶೋಕ್

ಬೆಂಗಳೂರು: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಅತ್ಯಂತ ಖಂಡನೀಯ. ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಯ ಮೇಲೆಯೇ ಈ ರೀತಿಯ ಹಲ್ಲೆ ನಡೆಯುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂಬುದಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದು ಬಿಜೆಪಿ ನಾಯಕ ಆರ್‌ ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದ್ದಾರೆ, ಕೃಷ್ಣ ಬೈರೇಗೌಡ  ಅವರೇ, ಈಗ ನಿಮ್ಮ ಮೌನ ಏಕೆ? ಬೆಂಗಳೂರಿನ ಬೇರೆ ಭಾಗಗಳಲ್ಲಿ ಒತ್ತುವರಿ ತೆರವು ವೇಳೆ…

Read More
National Security at Risk R Ashok Demands Immediate Halt to Congress SIR Process

R Ashok: ಎಸ್‌ಐಆರ್ ಪ್ರಕ್ರಿಯೆಯನ್ನು ಕಾಂಗ್ರೆಸ್ ಹೈಜಾಕ್ ಮಾಡುತ್ತಿದೆ: ಪ್ರತಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ

ಚಾಮರಾಜನಗರ: ಶಾಶ್ವತ ನಿವಾಸಿ ಪ್ರಮಾಣಪತ್ರದ ಮೂಲಕ ಎಸ್‌ಐರ್‌ ಪ್ರಕ್ರಿಯೆಯನ್ನೇ ಕಾಂಗ್ರೆಸ್‌ ಹೈಜಾಕ್‌ ಮಾಡುತ್ತಿದೆ. ಇದರಿಂದ ದೇಶದ ಭದ್ರತೆಗೆ ಧಕ್ಕೆಯಾಗಿದ್ದು, ಕೂಡಲೇ ಈ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashok) ಆಗ್ರಹಿಸಿದರು. ಅಲ್ಪಸಂಖ್ಯಾತರನ್ನ ಓಲೈಸಲು ಯತ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್‌ ಪ್ರಕ್ರಿಯೆಯ ಮೂಲಕ ಭಾರತೀಯರಿಗೆ ಮಾತ್ರ ಮತದಾನದ ಹಕ್ಕನ್ನು ನೀಡಲಾಗುತ್ತಿದೆ. ಆದರೆ ಕಾಂಗ್ರೆಸ್‌ ಸರ್ಕಾರ ಎಸ್‌ಐಆರ್‌ ಪ್ರಕ್ರಿಯೆಯನ್ನು ಹೈಜಾಕ್‌ ಮಾಡುತ್ತಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದ ನಂತರ ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡಲಾಗುತ್ತಿದೆ….

Read More
R ashok demands SIT for gruha lakshmi scam to government

R Ashok: ಗೃಹಲಕ್ಷ್ಮಿ ಯೋಜನೆಯಲ್ಲಿ 225 ಕೋಟಿ ರೂ. ಗೋಲ್‌ಮಾಲ್‌, ಎಸ್‌ಐಟಿ ತನಿಖೆ ಮಾಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ 225 ಕೋಟಿ ರೂ. ಸರ್ಕಾರಿ ಪ್ರಾಯೋಜಿತ ಲೂಟಿ ನಡೆದಿದ್ದು, ಇದರ ಹಿಂದೆ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಗ್ಯಾಂಗ್‌ ಇದೆ. ಈ ಅಕ್ರಮದ ವಿರುದ್ಧ ತನಿಖೆ ಮಾಡಲು ಕೂಡಲೇ ಎಸ್‌ಐಟಿ ರಚಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashok) ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 225 ಕೋಟಿ ರೂ. ಅಕ್ರಮ ಆಗಿದೆ ಎಂದು ಸಿಎಜಿ ವರದಿಯಲ್ಲಿ ಹೇಳಿದ್ದರೂ ಯಾವುದೇ ಕ್ರಮ ವಹಿಸಿಲ್ಲ. ನಕಲಿ ಖಾತೆಗಳಿಗೆ ಹಣ ಸಂದಾಯವಾಗಿದ್ದು, ಅಧಿಕಾರಿ ಹಾಗೂ ರಾಜಕಾರಣಿಗಳ ದೊಡ್ಡ ಗ್ಯಾಂಗ್‌…

Read More
R Ashok and BY Vijayendra went to regarding cross voting BJP

BJP: ಅಡ್ಡ ಮತದಾನದ ತನಿಖೆ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್‌ನಿಂದ ತುರ್ತು ಬುಲಾವ್! ದೆಹಲಿಗೆ ದೌಡಾಯಿಸಿದ ವಿಜಯೇಂದ್ರ, ಆರ್‌. ಅಶೋಕ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಸಂಭವಿಸಿದ ಅಡ್ಡ ಮತದಾನದ (Cross Voting) ಆಘಾತಕಾರಿ ಬೆಳವಣಿಗೆಯು ಕರ್ನಾಟಕ ಬಿಜೆಪಿಯಲ್ಲಿ (BJP) ತಲ್ಲಣ ಸೃಷ್ಟಿಸಿದ್ದು, ಈ ಬೆನ್ನಲ್ಲೇ ಹೈಕಮಾಂಡ್‌ನಿಂದ ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ರಾಜ್ಯ ಪ್ರಮುಖ ನಾಯಕರು ದೆಹಲಿಗೆ ಧಾವಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಮುಂಜಾನೆಯೇ ರಾಷ್ಟ್ರ ರಾಜಧಾನಿ ತಲುಪಿದ್ದರೆ, ಅವರ ಹಿಂದೆಯೇ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಕೂಡ ದೆಹಲಿ ವಿಮಾನವೇರಿದ್ದಾರೆ. ವರಿಷ್ಠರ ಮುಂದೆ ನಾಯಕರ ಅಗ್ನಿಪರೀಕ್ಷೆ ಪಕ್ಷದ ಶಾಸಕರಿಂದಲೇ…

Read More
R ashok slams government for created problem for nEET students

R Ashok: ಸಮಾವೇಶದ ಟ್ರಾಫಿಕ್ ಕಿರಿಕಿರಿಗೆ ನೀಟ್ ಅಭ್ಯರ್ಥಿಗಳು ಕಣ್ಣೀರು; ಸರ್ಕಾರದ ವಿರುದ್ಧ ಆರ್. ಅಶೋಕ್ ತೀವ್ರ ಆಕ್ರೋಶ

ಬೆಂಗಳೂರು: ರಾಜಧಾನಿಯಲ್ಲಿ ಭಾನುವಾರ ನಡೆದ ನೀಟ್ (NEET) ಮರುಪರೀಕ್ಷೆಯ ವೇಳೆ ಸೃಷ್ಟಿಯಾದ ಭಾರಿ ಸಂಚಾರ ದಟ್ಟಣೆಯಿಂದಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಾಗದೆ ವಂಚಿತರಾದ ಘಟನೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅತ್ಯಂತ ಪ್ರಮುಖವಾದ ಪರೀಕ್ಷೆ ಇರುವ ದಿನವೇ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ರಾಜಕೀಯ ಸಮಾವೇಶ ಹಮ್ಮಿಕೊಂಡಿದ್ದರಿಂದಲೇ ಇಡೀ ನಗರದ ರಸ್ತೆಗಳು ಬ್ಲಾಕ್ ಆಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಡಲಾಗಿದೆ…

Read More
National Security at Risk R Ashok Demands Immediate Halt to Congress SIR Process

R Ashok: ಕಾಂಗ್ರೆಸ್ ವಿರುದ್ಧ ಆರ್‌ ಅಶೋಕ್ ತೀವ್ರ ವಾಗ್ದಾಳಿ: ಬಿಡದಿ ಟೌನ್‌ಶಿಪ್ ಹೆಸರಲ್ಲಿ 2 ಲಕ್ಷ ಮರಗಳಿಗೆ ಕೊಡಲಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ನೀತಿಗಳು ಹಾಗೂ ಕಾನೂನು ಸುವ್ಯವಸ್ಥೆಯ ವೈಫಲ್ಯದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashok) ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ಹೊರಹಾಕಿದ್ದಾರೆ. ಬಿಡದಿ ಗ್ರೇಟರ್ ಟೌನ್‌ಶಿಪ್ ಹೆಸರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೃಹತ್ ರಿಯಲ್ ಎಸ್ಟೇಟ್ ದಂಧೆ ನಡೆಯುತ್ತಿದ್ದು, ಸುಮಾರು 2 ಲಕ್ಷ ಹಸಿರು ಮರಗಳನ್ನು ಧ್ವಂಸ ಮಾಡಲು ಸರ್ಕಾರ ಸಂಚು ರೂಪಿಸಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ನಾಯಕ…

Read More
R Ashok accuse congress for Zameer viral audio

R Ashok: ಕಾಂಗ್ರೆಸ್‌ ಒಳಜಗಳಕ್ಕೆ ಡಿಕೆಶಿ ಬಲಿ, ಸಿದ್ದರಾಮಯ್ಯ ಕೊಟ್ಟ ಹಳೇ ಬಸ್ಸಿಗೆ ಡೀಸೆಲ್‌ ಕೂಡ ಇಲ್ಲ: ಆರ್. ಅಶೋಕ್ ಲೇವಡಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ದಿಢೀರ್ ಬದಲಾವಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಗಮನದ ಬೆನ್ನಲ್ಲೇ, ಹೊಸದಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಕುರಿತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ತೀವ್ರ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರಿಗೆ ನೀಡಿರುವ ಅಧಿಕಾರ ಒಂಥರಾ ‘ಭಸ್ಮಾಸುರನ ಆಶೀರ್ವಾದ’ ಇದ್ದಂತೆ ಎಂದು ಲೇವಡಿ ಮಾಡಿರುವ ಅವರು, ಭಸ್ಮಾಸುರನಿಗೆ ಸಿಕ್ಕ ವರವೇ ಅವನಿಗೆ ಮುಳುವಾದಂತೆ ಈ ಮುಖ್ಯಮಂತ್ರಿ ಕುರ್ಚಿ ಡಿಕೆಶಿಯವರ…

Read More