BJP: ಅಡ್ಡ ಮತದಾನದ ತನಿಖೆ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ನಿಂದ ತುರ್ತು ಬುಲಾವ್! ದೆಹಲಿಗೆ ದೌಡಾಯಿಸಿದ ವಿಜಯೇಂದ್ರ, ಆರ್. ಅಶೋಕ್
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಸಂಭವಿಸಿದ ಅಡ್ಡ ಮತದಾನದ (Cross Voting) ಆಘಾತಕಾರಿ ಬೆಳವಣಿಗೆಯು ಕರ್ನಾಟಕ ಬಿಜೆಪಿಯಲ್ಲಿ (BJP) ತಲ್ಲಣ ಸೃಷ್ಟಿಸಿದ್ದು, ಈ ಬೆನ್ನಲ್ಲೇ ಹೈಕಮಾಂಡ್ನಿಂದ ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ರಾಜ್ಯ ಪ್ರಮುಖ ನಾಯಕರು ದೆಹಲಿಗೆ ಧಾವಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಮುಂಜಾನೆಯೇ ರಾಷ್ಟ್ರ ರಾಜಧಾನಿ ತಲುಪಿದ್ದರೆ, ಅವರ ಹಿಂದೆಯೇ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಕೂಡ ದೆಹಲಿ ವಿಮಾನವೇರಿದ್ದಾರೆ. ವರಿಷ್ಠರ ಮುಂದೆ ನಾಯಕರ ಅಗ್ನಿಪರೀಕ್ಷೆ ಪಕ್ಷದ ಶಾಸಕರಿಂದಲೇ…
