TOP NEWS
No shots fired at students can a minister issue such orders Jitendra Singh slams Rahul Gandhi in Lok Sabha

Rahul Gandhi: ರಾಹುಲ್ ಗಾಂಧಿಗೆ ಆಡಳಿತದ ಜ್ಞಾನವೇ ಇಲ್ಲ!; ಅಮಿತ್ ಶಾ ಮೇಲಿನ ಆರೋಪಕ್ಕೆ ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಭರ್ಜರಿ ತಿರುಗೇಟು!

ನವದೆಹಲಿ: ಕಳೆದ ವಾರ ದೆಹಲಿಯಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಆದೇಶ ನೀಡಿದ್ದರು ಎಂಬ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಗಂಭೀರ ಆರೋಪಕ್ಕೆ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ತಿರುಗೇಟು ನೀಡಿದೆ. ಪ್ರಧಾನಿ ಕಾರ್ಯಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಸಂಸತ್ತಿನಲ್ಲಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರಿಗೆ ಆಡಳಿತಾತ್ಮಕ ಜ್ಞಾನದ ಕೊರತೆಯಿದೆ ಎಂದು ಲೇವಡಿ…

Read More
Tempestuous scenes in Lok Sabha Rahul Gandhis controversial word usage over exam leak law triggers chaos

Rahul Gandhi: ದೇಶದ ಶಿಕ್ಷಣ ವ್ಯವಸ್ಥೆ ಆರ್‌ಎಸ್‌ಎಸ್ ಹಿಡಿತದಲ್ಲಿದೆ!; ಕಿಡಿಕಾರಿದ ರಾಹುಲ್ ಗಾಂಧಿ!

ನವದೆಹಲಿ: ಸಂಸತ್ತಿನ ಕೆಳಮನೆಯಾದ ಲೋಕಸಭೆಯು ಬುಧವಾರ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವಿನ ತೀವ್ರ ವಾಕ್ಸಮರ ಮತ್ತು ಭಾರಿ ಗದ್ದಲಕ್ಕೆ ಸಾಕ್ಷಿಯಾಯಿತು. ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಕಾಯ್ದೆಯ ಮೇಲಿನ ಚರ್ಚೆಯ ವೇಳೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಬಳಸಿದ “ಅಸಂಸದೀಯ” ಪದವು ಸದನದಲ್ಲಿ ತೀವ್ರ ಹಂಗಾಮೆ ಸೃಷ್ಟಿಸಿತು. ದೇಶದಲ್ಲಿ ಇತ್ತೀಚೆಗೆ ನಡೆದ ಯುವ ಸಮೂಹದ ಆಕ್ರೋಶದ ಕುರಿತು ಮಾತನಾಡಿದ ಅವರು, 18 ವರ್ಷದ ಯುವತಿಯೊಬ್ಬಳೊಂದಿಗಿನ ಸಂಭಾಷಣೆಯನ್ನು ಉಲ್ಲೇಖಿಸಿ “ನಿಜವಾದ ವಿದ್ಯಾರ್ಥಿ” ಹಾಗೂ…

Read More
NEET UG Row Rocks Parliament Rahul Gandhi Meets Speaker Om Birla Insists on Urgent Debate

NEET-UG: ಸಂಸತ್ತಿನಲ್ಲಿ ನೀಟ್ ಬಿರುಗಾಳಿ: ಸ್ಪೀಕರ್ ಓಂ ಬಿರ್ಲಾ ಭೇಟಿ ಮಾಡಿ ಚರ್ಚೆಗೆ ಪಟ್ಟು ಹಿಡಿದ ರಾಹುಲ್ ಗಾಂಧಿ ನಿಯೋಗ!

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET-UG) ಪರೀಕ್ಷೆ ಅಕ್ರಮ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ ವಿಷಯವೀಗ ಸಂಸತ್ತಿನಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ವಿಪಕ್ಷಗಳ ಸಂಸದರ ನಿಯೋಗವು ಮಂಗಳವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ, ಈ ಗಂಭೀರ ಬಿಕ್ಕಟ್ಟಿನ ಬಗ್ಗೆ ಸದನದಲ್ಲಿ ಸಮಗ್ರ ಚರ್ಚೆಗೆ ಅವಕಾಶ ನೀಡಬೇಕು ಎಂದು ಬಲವಾಗಿ ಆಗ್ರಹಿಸಿದೆ. ವಿದ್ಯಾರ್ಥಿಗಳ ಹಕ್ಕುಗಳನ್ನು ಹತ್ತಿಕ್ಕಲು ನಡೆಸಲಾದ…

Read More
Rahul Gandhi slams NTA and central government regarding neet exam centre allotment

Rahul Gandhi: ನೀಟ್ ಮರುಪರೀಕ್ಷೆ ಯಡವಟ್ಟು: ನಾಗ್ಪುರದ ವಿದ್ಯಾರ್ಥಿಗೆ ಅಬುಧಾಬಿಯಲ್ಲಿ ಸೆಂಟರ್! ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ತರಾಟೆ

ನವದೆಹಲಿ: ನೀಟ್ ಪರೀಕ್ಷೆಯ ಮರುಪರೀಕ್ಷೆ ಹಂಚಿಕೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಾಡಿರುವ ಎಡವಟ್ಟು ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮಹಾರಾಷ್ಟ್ರದ ನಾಗ್ಪುರದ ನೀಟ್ ಅಭ್ಯರ್ಥಿಯೊಬ್ಬನಿಗೆ ಜೂನ್ 21ರಂದು ನಡೆಯಲಿರುವ ಮರುಪರೀಕ್ಷೆಗೆ ಯುಎಇಯ ಅಬುಧಾಬಿಯಲ್ಲಿ ಪರೀಕ್ಷಾ ಕೇಂದ್ರವನ್ನು ನಿಗದಿಪಡಿಸಲಾಗಿದೆ. ಈ ಗಂಭೀರ ಲೋಪವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, (Rahul Gandhi) ದೇಶದ ಮಕ್ಕಳ ಭವಿಷ್ಯದ ಜೊತೆ ಜೂಜಾಡುವುದನ್ನು ಕೇಂದ್ರ ಸರ್ಕಾರ ತಕ್ಷಣ ನಿಲ್ಲಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳವಳ ವ್ಯಕ್ತಪಡಿಸಿದ…

Read More
National Security at Risk R Ashok Demands Immediate Halt to Congress SIR Process

R Ashok: ಕಾಂಗ್ರೆಸ್ ವಿರುದ್ಧ ಆರ್‌ ಅಶೋಕ್ ತೀವ್ರ ವಾಗ್ದಾಳಿ: ಬಿಡದಿ ಟೌನ್‌ಶಿಪ್ ಹೆಸರಲ್ಲಿ 2 ಲಕ್ಷ ಮರಗಳಿಗೆ ಕೊಡಲಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ನೀತಿಗಳು ಹಾಗೂ ಕಾನೂನು ಸುವ್ಯವಸ್ಥೆಯ ವೈಫಲ್ಯದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashok) ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ಹೊರಹಾಕಿದ್ದಾರೆ. ಬಿಡದಿ ಗ್ರೇಟರ್ ಟೌನ್‌ಶಿಪ್ ಹೆಸರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೃಹತ್ ರಿಯಲ್ ಎಸ್ಟೇಟ್ ದಂಧೆ ನಡೆಯುತ್ತಿದ್ದು, ಸುಮಾರು 2 ಲಕ್ಷ ಹಸಿರು ಮರಗಳನ್ನು ಧ್ವಂಸ ಮಾಡಲು ಸರ್ಕಾರ ಸಂಚು ರೂಪಿಸಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ನಾಯಕ…

Read More
dk shivakumar emotional post towards congress leaders

DK Shivakumar: ಗಾಂಧಿ ಕುಟುಂಬಕ್ಕೆ ಡಿಕೆಶಿ ಭಾವನಾತ್ಮಕ ಪತ್ರ: ರಾಜಕೀಯ ಪಯಣ ನೆನೆದು ಕೃತಜ್ಞತೆ!

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಾಳೆ ಅಧಿಕಾರ ಸೂತ್ರ ಹಿಡಿಯಲಿರುವ ಡಿ.ಕೆ. ಶಿವಕುಮಾರ್ (DK Shivakumar) ಅವರು, ಗಾಂಧಿ ಕುಟುಂಬದೊಂದಿಗೆ ತಮಗಿರುವ ದಶಕಗಳ ಕಾಲದ ಭಾವನಾತ್ಮಕ ನಂಟನ್ನು ನೆನಪಿಸಿಕೊಂಡು ಧನ್ಯವಾದ ಅರ್ಪಿಸಿದ್ದಾರೆ. ತಮ್ಮ ರಾಜಕೀಯ ಬದುಕಿನ ಏಳುಬೀಳುಗಳ ವಿವಿಧ ಹಂತಗಳಲ್ಲಿ ಗಾಂಧಿ ಪರಿವಾರದ ನಾಯಕರು ತಮಗೆ ನೀಡಿದ ಅಪ್ರತಿಮ ಬೆಂಬಲ, ನಂಬಿಕೆ ಮತ್ತು ಪ್ರೋತ್ಸಾಹವನ್ನು ಸ್ಮರಿಸಿ ಅವರು ಸುದೀರ್ಘವಾದ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿರುವ ಡಿ.ಕೆ. ಶಿವಕುಮಾರ್, “ನನ್ನ ಇಂದಿನ…

Read More
Rahul Gandhi slams cbse over extra fee

Rahul Gandhi: ಸಿಬಿಎಸ್‌ಇ ವಿರುದ್ಧ ರಾಹುಲ್ ಗಾಂಧಿ ಕಿಡಿ: ತಪ್ಪು ಮಂಡಳಿಯದ್ದು, ವಿದ್ಯಾರ್ಥಿಗಳಿಗೆ ಹಣದ ದಂಡ!

ನವದೆಹಲಿ: ಉತ್ತರ ಪತ್ರಿಕೆಗಳ ಮೌಲ್ಯಮಾಪನದಲ್ಲಿ ತಾನೇ ಎಡವಟ್ಟು ಮಾಡಿ, ಈಗ ಅದನ್ನು ಸರಿಪಡಿಸಲು ವಿದ್ಯಾರ್ಥಿಗಳಿಂದ ಭಾರಿ ಪ್ರಮಾಣದ ಶುಲ್ಕ ವಸೂಲಿ ಮಾಡುತ್ತಿರುವ ಕೇಂದ್ರ ಪ್ರೌಢಶಿಕ್ಷಣ ಮಂಡಳಿಯ (CBSE) ಧೋರಣೆಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಕಟುವಾಗಿ ಟೀಕಿಸಿದ್ದಾರೆ. ಶಿಕ್ಷಣ ಸಂಸ್ಥೆಗಳ ಒಳಗೆ ‘ಜೇಬುಕಳ್ಳರು’ ಕುಳಿತಿದ್ದಾರೆ ಎಂದು ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಆಕ್ರೋಶ ಹೊರಹಾಕಿರುವ ಅವರು, ಮಂಡಳಿಯು ಜ್ಞಾನದಾನದ ಸೇವೆಯನ್ನು ಬದಿಗಿಟ್ಟು ಶಿಕ್ಷಣವನ್ನು ಕೇವಲ ಒಂದು ಲಾಭದಾಯಕ ಉದ್ಯಮವನ್ನಾಗಿ ಮಾಡಿಕೊಂಡಿದೆ ಎಂದು…

Read More