Rahul Gandhi: ನೀಟ್ ಮರುಪರೀಕ್ಷೆ ಯಡವಟ್ಟು: ನಾಗ್ಪುರದ ವಿದ್ಯಾರ್ಥಿಗೆ ಅಬುಧಾಬಿಯಲ್ಲಿ ಸೆಂಟರ್! ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ತರಾಟೆ
ನವದೆಹಲಿ: ನೀಟ್ ಪರೀಕ್ಷೆಯ ಮರುಪರೀಕ್ಷೆ ಹಂಚಿಕೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಾಡಿರುವ ಎಡವಟ್ಟು ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮಹಾರಾಷ್ಟ್ರದ ನಾಗ್ಪುರದ ನೀಟ್ ಅಭ್ಯರ್ಥಿಯೊಬ್ಬನಿಗೆ ಜೂನ್ 21ರಂದು ನಡೆಯಲಿರುವ ಮರುಪರೀಕ್ಷೆಗೆ ಯುಎಇಯ ಅಬುಧಾಬಿಯಲ್ಲಿ ಪರೀಕ್ಷಾ ಕೇಂದ್ರವನ್ನು ನಿಗದಿಪಡಿಸಲಾಗಿದೆ. ಈ ಗಂಭೀರ ಲೋಪವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, (Rahul Gandhi) ದೇಶದ ಮಕ್ಕಳ ಭವಿಷ್ಯದ ಜೊತೆ ಜೂಜಾಡುವುದನ್ನು ಕೇಂದ್ರ ಸರ್ಕಾರ ತಕ್ಷಣ ನಿಲ್ಲಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳವಳ ವ್ಯಕ್ತಪಡಿಸಿದ…
