Sumalatha Ambareesh: ಮಂಡ್ಯ ತ್ಯಾಗಕ್ಕೆ ಸಿಗುತ್ತಾ ಬಂಪರ್ ಗಿಫ್ಟ್? ರಾಜ್ಯಸಭೆ ರೇಸ್ನಲ್ಲಿ ಸುಮಲತಾ ಅಂಬರೀಶ್ ಮುಂಚೂಣಿ!
ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಧರ್ಮದ ಲೆಕ್ಕಾಚಾರಕ್ಕಾಗಿ ತಮ್ಮ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟು, ಕಮಲ ಮುಡಿದಿದ್ದ ಮಾಜಿ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರಿಗೆ ಈಗ ದೆಹಲಿ ರಾಜಕಾರಣದ ದೊಡ್ಡ ಬಾಗಿಲು ತೆರೆಯುವ ಲಕ್ಷಣಗಳು ಕಾಣಿಸುತ್ತಿವೆ. ಮುಂಬರುವ ರಾಜ್ಯಸಭೆ ಚುನಾವಣೆಗೆ ಸುಮಲತಾ ಅಂಬರೀಶ್ ಅವರನ್ನು ಎನ್ಡಿಎ ಮೈತ್ರಿಕೂಟದ ಜಂಟಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಬಿಜೆಪಿ ವರಿಷ್ಠರು ಗಂಭೀರ ಆಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಜೂನ್ 18 ರಂದು ರಾಜ್ಯಸಭೆಯ ಪ್ರಮುಖ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು, ಅಭ್ಯರ್ಥಿಗಳ…
