Ram Mandir: ರಾಮಮಂದಿರ ದೇಣಿಗೆ ಹಗರಣ ತೀವ್ರ: ಎಂಟೂ ಆರೋಪಿಗಳು 14 ದಿನ ನ್ಯಾಯಾಂಗ ಬಂಧನಕ್ಕೆ!
ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಮಂದಿರದ (Ram Mandir) ದೇಣಿಗೆ ಹಾಗೂ ಕಾಣಿಕೆ ದುರುಪಯೋಗ ಹಗರಣದ ತನಿಖೆ ತೀವ್ರಗೊಂಡಿದ್ದು, ಬಂಧಿತರಾಗಿರುವ ಎಲ್ಲಾ ಎಂಟು ಮಂದಿ ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯವು ಜುಲೈ 13ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ತನಿಖೆಯ ಹಿತದೃಷ್ಟಿಯಿಂದ ಆರೋಪಿಗಳನ್ನು ಕಸ್ಟಡಿಯಲ್ಲೇ ಇರಿಸಬೇಕು ಎಂಬ ಪೊಲೀಸರ ವಾದವನ್ನು ಪುರಸ್ಕರಿಸಿ ನ್ಯಾಯಾಧೀಶರು ಈ ಆದೇಶ ನೀಡಿದ್ದಾರೆ….
