Akhilesh Yadav: ರಾಮಮಂದಿರ ದೇಣಿಗೆ ಅಕ್ರಮ ಆರೋಪ: AI ವೀಡಿಯೋ ಶೇರ್ ಮಾಡಿ ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ!
ಲಖನೌ: ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳನ್ನು ಮುನ್ನೆಲೆಗೆ ತಂದು ಸಮಾಜವಾದಿ ಪಾರ್ಟಿ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ (Akhilesh Yadav) ಅವರು ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಕೃತಕ ಬುದ್ಧಿಮತ್ತೆ (AI) ಆಧಾರಿತ ವೀಡಿಯೋ ಮೂಲಕ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಮಲ ಪಾಳಯಕ್ಕೆ ಮತ ಹಾಕಬೇಡಿ ಎಂದು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದ್ದಾರೆ. ಎಐ ವೀಡಿಯೋ ಹಂಚಿಕೊಂಡ ಯಾದವ್ ಕನ್ನೌಜ್ ಕ್ಷೇತ್ರದ ಲೋಕಸಭಾ ಸಂಸದ…
